ಪಾದಯಾತ್ರೆ ಸಂಬಂಧ ಬಿಜೆಪಿಯಲ್ಲೇ ಒಮ್ಮತ ಇಲ್ಲ: ಗೃಹ ಸಚಿವ ಜಿ. ಪರಮೇಶ್ವರ್​ ವಾಗ್ದಾಳಿ

Ravi Talawar
ಪಾದಯಾತ್ರೆ ಸಂಬಂಧ ಬಿಜೆಪಿಯಲ್ಲೇ ಒಮ್ಮತ ಇಲ್ಲ: ಗೃಹ ಸಚಿವ ಜಿ. ಪರಮೇಶ್ವರ್​ ವಾಗ್ದಾಳಿ
WhatsApp Group Join Now
Telegram Group Join Now

ಬೆಂಗಳೂರು: ‘ಬಿಜೆಪಿಯವರು ಮೊದಲು ಅವರ ಮನೆಯನ್ನು ಸರಿ ಮಾಡಿಕೊಳ್ಳಲಿ. ನಮಗೆ ಬುದ್ಧಿ ಹೇಳುತ್ತಾರಲ್ಲ ಎ‌ಂದು ಗೃಹ ಸಚಿವ ಜಿ. ಪರಮೇಶ್ವರ್​ ವಾಗ್ದಾಳಿ ನಡೆಸಿದ್ದಾರೆ.

ಸದಾಶಿವನಗರ ನಿವಾಸದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಾದಯಾತ್ರೆ ಸಂಬಂಧ ಬಿಜೆಪಿಯಲ್ಲೇ ಒಮ್ಮತ ಇಲ್ಲ ಎಂಬ ವಿಚಾರದ ಬಗ್ಗೆ ಪ್ರತಿಕ್ರಿಯಿಸುತ್ತಾ, “ಬಿಜೆಪಿಯವರು ಅವರ ಮನೆಯನ್ನು ಸರಿ ಮಾಡಿಕೊಳ್ಳಲಿ. ಅವರ ಪಕ್ಷದ ವಿಚಾರ ಮಾತನಾಡುವುದಿಲ್ಲ‌‌‌. ಮನೆ ಒಂದು ಮೂರು ಬಾಗಿಲೋ, ನಾಲ್ಕು ಬಾಗಿಲೋ ಏನೋ ಅಂತಾರಲ್ಲ. ಅದೆಲ್ಲ ನಮಗೆ ಗೊತ್ತಿಲ್ಲ” ಎಂದರು.

ವಿರೋಧ ಪಕ್ಷಗಳ ಪಾದಯಾತ್ರೆ ಕುರಿತು ಮಾತನಾಡಿ, “ನಾವು ಪಾದಯಾತ್ರೆ ಮಾಡುವುದಿಲ್ಲ. ಸಮಾವೇಶದ ಮಾದರಿಯಲ್ಲಿ ಜನರಿಗೆ ಏನು ತಿಳಿಸಬೇಕೋ ತಿಳಿಸುತ್ತೇವೆ. ಬಿಜೆಪಿ ಪಾದಯಾತ್ರೆಗೆ ನಾವು ಅನುಮತಿ ಕೊಡುವುದಿಲ್ಲ ಅಂತ ಹೇಳಿದ್ದೇನೆ, ಕೊಡುವುದಿಲ್ಲ. ಅವರ ಪಾಡಿಗೆ ಅವರು ಪಾದಯಾತ್ರೆ ಮಾಡಿಕೊಳ್ಳಲಿ. ಜನರಿಗೆ ತೊಂದರೆ ಆದರೆ ಮಾತ್ರ ಸುಮ್ಮನೆ ಇರುವುದಿಲ್ಲ. ಕಾನೂನು ಬಾಹಿರ ಕೆಲಸ ಮಾಡಿದರೆ ಮಾತ್ರ ಕ್ರಮ ತೆಗೆದುಕೊಳ್ಳುತ್ತೇವೆ. ಅವರ ಪಾಡಿಗೆ ಅವರು ನಡೆದುಕೊಂಡು ಹೋಗಲು ನಮ್ಮದೇನೂ ಅಭ್ಯಂತರ ಇಲ್ಲ” ಎಂದರು.

WhatsApp Group Join Now
Telegram Group Join Now
Share This Article