ದರ್ಶನ್​ಗೆ ಪರಪ್ಪನ ಜೈಲಿನಲ್ಲೇ ಎಲ್ಲಾ ಸೌಲಭ್ಯ; ಪರಪ್ಪನ ಅಗ್ರಹಾರದ ಏಳು ಅಧಿಕಾರಿಗಳು ಸಸ್ಪೆಂಡ್

Ravi Talawar
ದರ್ಶನ್​ಗೆ ಪರಪ್ಪನ  ಜೈಲಿನಲ್ಲೇ ಎಲ್ಲಾ ಸೌಲಭ್ಯ; ಪರಪ್ಪನ ಅಗ್ರಹಾರದ ಏಳು ಅಧಿಕಾರಿಗಳು ಸಸ್ಪೆಂಡ್
WhatsApp Group Join Now
Telegram Group Join Now

ನಟ ದರ್ಶನ್ ಅವರು ಕೇಂದ್ರ ಕಾರಾಗೃಹದಲ್ಲಿ ಹಾಯಾಗಿ ಸಮಯ ಕಳೆಯುತ್ತಿದ್ದಾರೆ. ಜೈಲಿನಲ್ಲಿ ಕುಳಿತು ಸಿಗರೇಟ್ ಸೇದುತ್ತಾ, ಕಾಫಿ ಕುಡಿಯುತ್ತಾ ಇದ್ದರು. ಈ ಫೋಟೋ ವೈರಲ್ ಆಗಿತ್ತು. ಇದರ ಜೊತೆಗೆ ದರ್ಶನ್ ಅವರು ವಿಡಿಯೋ ಕಾಲ್ ಮಾಡಿ ಮಾತನಾಡಿದ್ದರು. ಈ ಬಗ್ಗೆ ಗೃಹಸಚಿವ ಜಿ. ಪರಮೇಶ್ವರ್ ಮಾತನಾಡಿದ್ದಾರೆ. ಜೈಲಿನ ಏಳು ಅಧಿಕಾರಿಗಳನ್ನು ಅವರು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ.

‘ಮೇಲಧಿಕಾರಿಗಳು ಈ ಪ್ರಕರಣದಲ್ಲಿ ನೇರವಾಗಿ ಭಾಗಿ ಆಗಿದ್ದರೆ ಅವರನ್ನು ತೆಗೆದು ಹಾಕುತ್ತೇವೆ. ವರದಿ ಬಂದ ನಂತರ ಈ ಬಗ್ಗೆ ಕ್ರಮ ಕೈಗೊಳ್ಳುತ್ತೇವೆ’ ಎಂದು ಪರಮೇಶ್ವರ್ ಅವರು ಭರವಸೆ ನೀಡಿದ್ದಾರೆ. ಊಟದ ವಿಚಾರ ಬಗ್ಗೆಯೂ ಅವರು ಮಾತನಾಡಿದ್ದಾರೆ. ‘ದರ್ಶನ್​ಗೆ ಚಿಕನ್ ಬಿರಿಯಾನಿ ಕೊಟ್ಟಿಲ್ಲ. ಜೈಲಿನ ನಿಯಮದಂತೆ ನಡೆಯಲಾಗುತ್ತಿದೆ. ಈಗ ನಡೆದ ಘಟನೆ ಸಮರ್ಥಿಸಿಕೊಳ್ಳುತ್ತಿಲ್ಲ’ ಎಂದಿದ್ದಾರೆ ಪರಮೇಶ್ವರ್.

WhatsApp Group Join Now
Telegram Group Join Now
Share This Article