ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿ, ಭಾರತದ ಜತೆಗೆ ಮತ್ತಷ್ಟು ದ್ವೇಷ ಕಟ್ಟಿಕೊಂಡ ಪಾಕಿಸ್ತಾನಕ್ಕೆ, ಭಾರತ ಸರಿಯಾದ ಉತ್ತರವನ್ನು ನೀಡಿದೆ. ಭಾರತ ಪಾಕಿಸ್ತಾನಕ್ಕೆ ಎಲ್ಲದಕ್ಕೂ ಅಗತ್ಯ ಇರುವ ರಾಷ್ಟ್ರ, ಭಾರತ ಇದ್ದರೆ ಮಾತ್ರ ಪಾಕ್ ಸುರಕ್ಷಿತವಾಗಿದೆ. ಇದನ್ನು ಅರಿಯದ ಪಾಕ್ ತನ್ನ ಕ್ರೂರ ಕೃತ್ಯವನ್ನು ಎಸಗಿದೆ. ಭಾರತದ ಪ್ರಜೆಗಳ ಮೇಲೆ ಗುಂಡಿನ ದಾಳಿ ನಡೆಸಿದ ಪಾಕ್ಗೆ ಸರಿಯಾಗಿ ಬುದ್ಧಿ ಕಳಿಸಲು ಭಾರತ ಸಿಂಧೂ ನದಿ ನೀರು ಬೀಡುವುದನ್ನು ನಿಲ್ಲಿಸಿದೆ. ಇದು ಪಾಕ್ಗೆ ದೊಡ್ಡ ಪೆಟ್ಟು ಬಿದ್ದಿದೆ. ಪಾಕ್ಗೆ ಎಲ್ಲದಕ್ಕೂ ಈ ನೀರೇ ಆಸರೆಯಾಗಿತ್ತು. ಆದರೆ ಇದೀಗ ಇದನ್ನೇ ಭಾರತ ಸರ್ಕಾರ ನಿಲ್ಲಿಸಿದೆ. ಭಾರತ ಸರ್ಕಾರದ ಈ ನಿರ್ಧಾರಕ್ಕೆ ಪಾಕ್ ಸರ್ಕಾರ ಕೆಂಡಕಾರುತ್ತಿದೆ. ಪಾಕಿಸ್ತಾನ ಪೀಪಲ್ಸ್ ಪಾರ್ಟಿ (ಪಿಪಿಪಿ) ಅಧ್ಯಕ್ಷ ಬಿಲಾವಲ್ ಭುಟ್ಟೋ-ಜರ್ದಾರಿ ಭಾರತದ ಈ ಕ್ರಮವನ್ನು ಟೀಕಿಸಿದ್ದಾರೆ. ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಭುಟ್ಟೋ-ಜರ್ದಾರಿ, ಸಿಂಧೂ ನಮ್ಮದು ಮತ್ತು ಅದು ನಮ್ಮದೇ ಆಗಿರುತ್ತದೆ. ನೀರು ಬಿಟ್ಟರೇ ಸರಿ ಇಲ್ಲದಿದ್ದರೆ ನಿಮ್ಮ ರಕ್ತ ಹರಿಯುತ್ತದೆ ಎನ್ನುವ ಮೂಲಕ ಯುದ್ಧಕ್ಕೆ ಪರೋಕ್ಷವಾಗಿ ಆಹ್ವಾನ ನೀಡಿದ್ದಾರೆ.
ಭಾರತ ಪಹಲ್ಗಾಮ್ ದಾಳಿಗೆ ಪಾಕಿಸ್ತಾನವನ್ನು ಬಲಿಪಶುವನ್ನಾಗಿ ಮಾಡುತ್ತಾ, ತನ್ನ ಆಂತರಿಕ ಭದ್ರತಾ ಲೋಪಗಳಿಂದ ಗಮನವನ್ನು ಬೇರೆಡೆ ಸೆಳೆಯುತ್ತಿದೆ. ಭಾರತವು ಇಸ್ಲಾಮಾಬಾದ್ ಜೊತೆಗಿನ ರಾಜತಾಂತ್ರಿಕ ಸಂಬಂಧವನ್ನು ಕಡಿದುಕೊಳ್ಳಲು ಮುಂದಾಗಿದೆ. ಈ ಮೂಲಕ ಪಾಕಿಸ್ತಾನಿ ಮಿಲಿಟರಿ ಅಟ್ಯಾಚ್ಗಳನ್ನು ಹೊರಹಾಕುವುದು, ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸುವುದು ಮತ್ತು ಅಟ್ಟಾರಿ ಭೂ ಸಾರಿಗೆ ಪೋಸ್ಟ್ ಅನ್ನು ಮುಚ್ಚುವುದು ಸೇರಿದಂತೆ ಹಲವಾರು ರಾಜತಾಂತ್ರಿಕ ಮತ್ತು ಆರ್ಥಿಕ ಕ್ರಮಗಳನ್ನು ಪ್ರಾರಂಭಿಸಿದೆ. ಇದೀಗ ಈ ಕ್ರಮಗಳು ಪಾಕಿಸ್ತಾನಕ್ಕೆ ಸಂಕಷ್ಟಕ್ಕೆ ಕಾರಣವಾಗಿದೆ.
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ದಲ್ಲಿ 26 ನಾಗರಿಕರ ಮೇಲೆ ದಾಳಿ ಮಾಡಿದ ಲಷ್ಕರ್-ಎ-ತೈಬಾ (ಎಲ್ಇಟಿ) ವಿರುದ್ಧ ಭಾರತೀಯ ಸೇನೆ ಈಗಾಗಲೇ ಕಾರ್ಯಚರಣೆ ಮುಂದುವರಿಸಿದೆ. ಈ ದಾಳಿ ನಡೆಸಿದ ಸಂಘಟನೆಗೆ ಪಾಕ್ ಸರ್ಕಾರವೇ ಬೆಂಬಲ ನೀಡಿದೆ. ಈ ಕಾರಣಕ್ಕೆ ಭಾರತ ಈ ಕ್ರಮವನ್ನು ಅನುಸರಿಸಿದೆ. ಭಾರತದ ಸರ್ಕಾರ ಈ ಕ್ರಮ ತೆಗೆದುಕೊಳ್ಳುತ್ತಿದ್ದಂತೆ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ಭುಟ್ಟೋ-ಜರ್ದಾರಿ ತುರ್ತು ಸಭೆ ನಡೆಸಿದ್ದಾರೆ. ಸಿಂಧೂ ನದಿಯ ನೀರು ಪಾಕ್ಗೆ ಎಷ್ಟು ಮುಖ್ಯ ಎನ್ನುವುದು ಈ ನಾಯಕರ ಮಾತಿನಿಂದ ಅರ್ಥವಾಗುತ್ತಿದೆ.