ಅಧಿಕಾರಿ ಅಕ್ರಮ ಎಸಗಿದ್ರೆ ಸಿಎಂ ಯಾಕ್ ರಿಸೈನ್ ಮಾಡ್ಬೇಕು? ಡಿಸಿಎಂ ಕಿಡಿನುಡಿ

Ravi Talawar
ಅಧಿಕಾರಿ ಅಕ್ರಮ ಎಸಗಿದ್ರೆ ಸಿಎಂ ಯಾಕ್ ರಿಸೈನ್ ಮಾಡ್ಬೇಕು? ಡಿಸಿಎಂ ಕಿಡಿನುಡಿ
WhatsApp Group Join Now
Telegram Group Join Now

ಬೆಂಗಳೂರು: “ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆಯಲ್ಲಿ ತಪ್ಪು ಮಾಡಿರುವುದು ಬ್ಯಾಂಕ್ ಮ್ಯಾನೇಜರ್. ಇದಕ್ಕೆ ಸಿದ್ದರಾಮಯ್ಯನವರು ಏಕೆ ರಾಜೀನಾಮೆ ಕೊಡಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ಧಾರೆ.

ವಿಧಾನಸೌಧದಲ್ಲಿ ಇಂದು ಮಾತನಾಡಿದ ಅವರು, “ಈ ಹಗರಣಕ್ಕೂ ಸಿದ್ದರಾಮಯ್ಯನವರಿಗೂ ಏನು ಸಂಬಂಧ?. ಅಧಿಕಾರಿ ತಪ್ಪು ಮಾಡಿದರೆ ಮುಖ್ಯಮಂತ್ರಿಗಳು ಹೇಗೆ ಜವಾಬ್ದಾರರಾಗುತ್ತಾರೆ?. ಬ್ಯಾಂಕ್​ ಅಧಿಕಾರಿ ಒಂದೇ ದಿನದಲ್ಲಿ ಆರೋಪಿಗಳಿಗೆ ಸಾಲ ಮಂಜೂರು ಮಾಡಿದ್ದಾರೆ. ಇದಕ್ಕೆ ಕೇಂದ್ರ ಹಣಕಾಸು ಸಚಿವರನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆಯೇ?” ಎಂದು ಹೇಳಿದರು.

“ಪ್ರತಿಪಕ್ಷಗಳಿಗೆ ಸದನದ ಕಲಾಪಗಳ ನಡಾವಳಿಗಳ ಕುರಿತು ತಿಳುವಳಿಕೆಯಿಲ್ಲ. ಅವರಿಗೆ ನಾವು ಮಾತನಾಡಲು ಅವಕಾಶ ನೀಡಿದ್ದೇವೆ. ಮುಖ್ಯಮಂತ್ರಿಗಳಿಗೆ ಮಾತನಾಡಲು ಅವಕಾಶ ನೀಡಬೇಕಿತ್ತು, ಆದರೆ ನೀಡಿಲ್ಲ. ಈ ವಿಚಾರದಲ್ಲಿ ಪ್ರತಿಪಕ್ಷಗಳು ರಾಜಕೀಯ ಮಾಡುತ್ತಿದ್ದು, ನಮಗೂ ರಾಜಕೀಯ ಮಾಡಲು ಬರುತ್ತದೆ” ಎಂದು ತಿಳಿಸಿದರು.

 

WhatsApp Group Join Now
Telegram Group Join Now
Share This Article