ಆರ್‌ಸಿಬಿ ಸಂಭ್ರಮದಲ್ಲಿ ಸೂತಕ: ಕಾಲ್ತುಳಿತ ಕೇಸ್‌ ವಿಚಾರಣೆ ಹೈಕೋರ್ಟ್‌ನಲ್ಲಿ ಮಧ್ಯಾಹ್ನ ಮುಂಡೂಡಿಕೆ

Ravi Talawar
ಆರ್‌ಸಿಬಿ ಸಂಭ್ರಮದಲ್ಲಿ ಸೂತಕ: ಕಾಲ್ತುಳಿತ ಕೇಸ್‌ ವಿಚಾರಣೆ ಹೈಕೋರ್ಟ್‌ನಲ್ಲಿ ಮಧ್ಯಾಹ್ನ ಮುಂಡೂಡಿಕೆ
WhatsApp Group Join Now
Telegram Group Join Now

ಬೆಂಗಳೂರು: ಐಪಿಎಲ್​ ಚಾಂಪಿಯನ್​ ಆದ​ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ವಿಜಯೋತ್ಸವ ಆಚರಣೆ ವೇಳೆ ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಬುಧವಾರ ಸಂಭವಿಸಿದ ಕಾಲ್ತುಳಿತ ಪ್ರಕರಣದ ಕುರಿತು ಹೈಕೋರ್ಟ್​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಸಲ್ಲಿಕೆಯಾಗಿದೆ.

ದುರಂತ ಘಟನೆಯಲ್ಲಿ, 11 ಜನರು ಸಾವನ್ನಪ್ಪಿ, 42 ಮಂದಿ ಗಾಯಗೊಂಡಿದ್ದರು. ಇಂದು (ಗುರುವಾರ) ಬೆಳಗ್ಗೆ ಉಚ್ಚ ನ್ಯಾಯಾಲಯದ ಕಲಾಪ ಪ್ರಾರಂಭವಾಗುತ್ತಿದ್ದಂತೆ, ಅರ್ಜಿದಾರರ ಪರ ವಕೀಲರು ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ.ಕಾಮೇಶ್ವರ್ ರಾವ್ ಅವರ ಪೀಠದ ಮುಂದೆ ಪ್ರಸ್ತಾಪಿಸಿ ತುರ್ತು ವಿಚಾರಣೆಗೆ ಕೋರಿದರು.

ಇದಕ್ಕೆ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಘಟನೆ ಮತ್ತು ಈವರೆಗೂ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಸಂಗ್ರಹಿಸಬೇಕಿದೆ. ಹಾಗಾಗಿ, ವಿಚಾರಣೆಯನ್ನು ಮಧ್ಯಾಹ್ನ 2:30ಕ್ಕೆ ಮುಂದೂಡಬೇಕು ಎಂದು ಕೋರಿದರು. ಇದಕ್ಕೆ ಸಮ್ಮತಿಸಿದ ಪೀಠ, ವಿಚಾರಣೆಯನ್ನು ಮಧ್ಯಾಹ್ನಕ್ಕೆ ಮುಂದೂಡಿತು.

WhatsApp Group Join Now
Telegram Group Join Now
Share This Article