ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತದ ಪಂಚ ನಿರ್ಧಾರಗಳನ್ನು ತೆಗೆದುಕೊಂಡಿದ್ದು, ಅದರಲ್ಲಿ ಪ್ರಮುಖ ಸಿಂಧೂ ನದಿ ನೀರನ್ನು ಪಾಕಿಸ್ತಾನ ಬಿಡುವುದನ್ನು ಸ್ಥಗಿತಗೊಳಿಸಿದ್ದು, ಇದೀಗ ಈ ಬಗ್ಗೆ ವಿಶ್ವಸಂಸ್ಥೆಯಲ್ಲಿಪಾಕ್ ತಕರಾರು ಎತ್ತಿದೆ. ಜತೆಗೆ ಭಾರತದ ನಿರ್ಧಾರವನ್ನು ಟೀಕಿಸಿದೆ. ಆದರೆ ಇದಕ್ಕೆ ಭಾರತ ಸರಿಯಾಗಿ ಉತ್ತರವನ್ನು ನೀಡಿದೆ. ಭಾರತ ಪಹಲ್ಗಾಮ್ ಭಯೋತ್ಪಾದಕ ದಾಳಿ ಮಾತ್ರವಲ್ಲದೆ ಅನೇಕ ಉದಾಹರಣೆಗಳನ್ನು ನೀಡಿ. ಹಾಗೂ ಭಯೋತ್ಪಾದನೆ ದಾಳಿ ಭಾರತದ ಜತೆಗೆ ಮಾಡಿಕೊಂಡ ಹಲವು ಒಪ್ಪಂದವನ್ನು ಉಲ್ಲಂಘನೆ ಮಾಡಿದೆ ಎಂದು ಭಾರತ ವಿಶ್ವಸಂಸ್ಥೆಯಲ್ಲಿ ತಿಳಿಸಿದೆ. 1960 ರ ನೀರು ಹಂಚಿಕೆ ಒಪ್ಪಂದವನ್ನು ಉಲ್ಲಂಘಿಸಿದ್ದು ಭಾರತವಲ್ಲ, ಪಾಕಿಸ್ತಾನ ಎಂದು ಹೇಳಿದೆ. ಸಿಂಧೂ ಜಲ ಒಪ್ಪಂದಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನಿ ನಿಯೋಗ ಅನೇಕ ತಪ್ಪು ಮಾಹಿತಿಯನ್ನು ಹರಡಿದೆ. ಪಾಕ್ ಮಾಡುತ್ತಿರುವ ಆರೋಪಗಳನ್ನು ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿ ಪರ್ವತನೇನಿ ಹರೀಶ್ ತಳ್ಳಿಹಾಕಿದ್ದಾರೆ.
ಭಾರತ ಸಿಂಧೂ ಒಪ್ಪಂದವನ್ನು ಮುರಿದಿಲ್ಲ, ಪಾಕ್ ಮಾಡುತ್ತಿರವ ಭಯೋತ್ಪಾದನ ದಾಳಿಯಿಂದ ಈ ಒಪ್ಪಂದವನ್ನು ಮುರಿದುಕೊಂಡಿದೆ. ಇತ್ತೀಚಿನ ಪಹಲ್ಗಾಮ್ ದಾಳಿಯು ಇತ್ತೀಚಿನ ಉದಾಹರಣೆಯಾಗಿದೆ ಎಂದು ಹೇಳಿದ್ದಾರೆ. ಮತ್ತೆ ಮತ್ತೆ ಭಾರತದ ಮೇಲೆ ಗಡಿಯಾಚೆಗಿನ ಭಯೋತ್ಪಾದನೆ ದಾಳಿಯಿಂದ ಈ ಒಪ್ಪಂದವನ್ನು ಮುರಿದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ಭಾರತವು 65 ವರ್ಷಗಳ ಹಿಂದೆ ಸಿಂಧೂ ನದಿ ಜಲ ಒಪ್ಪಂದವನ್ನು ಮಾಡಿಕೊಂಡಿತ್ತು. ಒಪ್ಪಂದದ ಪೀಠಿಕೆ ಹೇಳುವ ಪ್ರಕಾರ ಈ ಒಪ್ಪಂದವನ್ನು ಸದ್ಭಾವನೆ ಮತ್ತು ಸ್ನೇಹದ ಮನೋಭಾವಗಾಗಿ ಮಾಡಿಕೊಂಡಿತ್ತು. ಆರುವರೆ ದಶಕಗಳಲ್ಲಿ, ಪಾಕಿಸ್ತಾನವು ಭಾರತದ ಮೇಲೆ ಮೂರು ಯುದ್ಧಗಳು ಮತ್ತು ಸಾವಿರಾರು ಭಯೋತ್ಪಾದಕ ದಾಳಿಗಳನ್ನು ನಡೆಸುವ ಮೂಲಕ ಒಪ್ಪಂದದ ಮಹತ್ವವನ್ನು ಉಲ್ಲಂಘಿಸಿದೆ.