ಬೆಂಗಳೂರು: ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ–2025 ಕ್ಕೆ ಸಂಬಂಧಿಸಿದಂತೆ, ಒಳಮೀಸಲಾತಿ ಸಮೀಕ್ಷೆಯ ಅವಧಿಯನ್ನು ರಾಜ್ಯ ಸರ್ಕಾರ ವಿಸ್ತರಣೆ ಮಾಡಿದ್ದು, ಮನೆ ಮನೆ ಭೇಟಿ ಸಮೀಕ್ಷೆಯು ಮೇ 17 ರಿಂದ 25 ವರೆಗೆ ವಿಸ್ತರಿಸಲಾಗಿದೆ.
ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಕುರಿತು ನ್ಯಾಯಮೂರ್ತಿ ಡಾ.ಹೆಚ್.ಎನ್.ನಾಗಮೋಹನದಾಸ್ ಅವರ ಏಕ ಸದಸ್ಯ ವಿಚಾರಣಾ ಆಯೋಗವನ್ನು ಸರ್ಕಾರ ರಚಿಸಿದ್ದು, ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಸಂಬಂಧದ ವಿವಿಧ ಅಂಶಗಳ ಬಗ್ಗೆ ದತ್ತಾಂಶ ಸಂಗ್ರಹಣೆಗಾಗಿ ಜಿಲ್ಲೆಯಲ್ಲಿ ನಡೆದಿರುವ ಸಮೀಕ್ಷೆ ಕಾರ್ಯದ ಅವಧಿಯನ್ನು ಮೇ. 28 ರವರೆಗೆ ವಿಸ್ತರಿಸಲಾಗಿದೆ.
ಮತಗಟ್ಟೆವಾರು ವಿಶೇಷ ಶಿಬಿರಗಳಲ್ಲಿ ಸಮೀಕ್ಷೆ ಕೈಗೊಳ್ಳುವ ಅವಧಿಯನ್ನು ಮೇ 26 ರಿಂದ 28 ಮೇ ವರೆಗೂ ನಿಗದಿಗೊಳಿಸಿದೆ. ಆನ್ಲೈನ್ ಮೂಲಕ ಸ್ವಯಂ ಘೋಷಣೆ ಮಾಡುವ ಅವಧಿಯನ್ನು ಮೇ 19 ರಿಂದ ಮೇ 28 ರವರೆಗೆ ನಿಗದಿಗೊಳಿಸಿದೆ.