ಕಸ್ತೂರಿರಂಗನ್ ವರದಿ ಶಿಫಾರಸುಗಳ ಸಂಪೂರ್ಣ ಅನುಷ್ಠಾನ ಅಸಾಧ್ಯ ಎಂದ ಈಶ್ವರ್ ಖಂಡ್ರೆ

Ravi Talawar
ಕಸ್ತೂರಿರಂಗನ್ ವರದಿ ಶಿಫಾರಸುಗಳ ಸಂಪೂರ್ಣ ಅನುಷ್ಠಾನ ಅಸಾಧ್ಯ ಎಂದ ಈಶ್ವರ್ ಖಂಡ್ರೆ
WhatsApp Group Join Now
Telegram Group Join Now

ಬೆಂಗಳೂರು, ಆಗಸ್ಟ್ 29: ಕೇಂದ್ರ ಸರ್ಕಾರದ ಕಸ್ತೂರಿರಂಗನ್ ಸಮಿತಿಯ ಶಿಫಾರಸುಗಳನ್ನು ಕರ್ನಾಟಕ ಸರ್ಕಾರ ಪೂರ್ಣವಾಗಿ ಜಾರಿಗೊಳಿಸಲು ಸಾಧ್ಯವಿಲ್ಲ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಬುಧವಾರ ನಡೆದ ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ ನೀಡಿದ ಸಲಹೆಗಳ ಆಧಾರದ ಮೇಲೆ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ರಾಜ್ಯ ಸರ್ಕಾರವು ಈಗಾಗಲೇ 16,632 ಚದರ ಕಿ.ಮೀ. ಪ್ರದೇಶವನ್ನು ಅಭಯಾರಣ್ಯಗಳು, ರಾಷ್ಟ್ರೀಯ ಉದ್ಯಾನವನಗಳು ಮತ್ತು ಪರಿಸರ ಸೂಕ್ಷ್ಮ ವಲಯಗಳನ್ನಾಗಿ ಘೋಷಣೆ ಮಾಡಿದೆ. ಉಳಿದ ಪ್ರದೇಶದಲ್ಲಿ 1,533 ಮನೆಗಳು, ಗ್ರಾಮಗಳು ಮತ್ತು ಇತರ ವಸತಿ ಆವಾಸಸ್ಥಾನಗಳಿವೆ. ಜನರ ಹಕ್ಕುಗಳು ಮತ್ತು ಜೀವನೋಪಾಯವನ್ನು ರಕ್ಷಿಸಬೇಕಾಗಿದೆ ಎಂದು ಅವರು ಹೇಳಿದ್ದಾರೆ.

WhatsApp Group Join Now
Telegram Group Join Now
Share This Article