ಸರ್ಕಾರ ಬೀಳಿಸುವುದು ಅಸಾಧ್ಯ: ಸಚಿವ ಎಂ.ಬಿ. ಪಾಟೀಲ್

Ravi Talawar
ಸರ್ಕಾರ ಬೀಳಿಸುವುದು ಅಸಾಧ್ಯ: ಸಚಿವ ಎಂ.ಬಿ. ಪಾಟೀಲ್
WhatsApp Group Join Now
Telegram Group Join Now

ಬೆಂಗಳೂರು,11: ಸರ್ಕಾರ ಬೀಳಿಸುವುದು ಅಸಾಧ್ಯವಾದ ಮಾತು. ಬಿಜೆಪಿಯ ಶಾಸಕರೇ ನಮ್ಮ‌ ಜೊತೆ ಇದ್ದಾರೆ. ಜೆಡಿಎಸ್​​ನಲ್ಲಿರುವವರು ಅತಂತ್ರರಾಗಿದ್ದಾರೆ. ಲೀಡರ್ಸ್​ಗಳು ನಮ್ಮನ್ನು ಸೇರಿಸಿಕೊಳ್ಳಿ ಅಂತ ಕೇಳುತ್ತಿದ್ದಾರೆ ಎಂದು ಸಚಿವ ಎಂ.ಬಿ.ಪಾಟೀಲ್ ಪ್ರತಿಕ್ರಿಯೆ ನೀಡಿದರು.

ಸದಾಶಿವ ನಗರದ ನಿವಾಸದಲ್ಲಿ ಮಾತನಾಡಿದ ಅವರು, ಕೆಲವೇ ತಿಂಗಳುಗಳಲ್ಲಿ ಸರ್ಕಾರ ಬೀಳುತ್ತೆ ಎಂಬ ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಇದು ರಾಜಕೀಯ ಹೇಳಿಕೆ ಅಷ್ಟೇ. ಈ ಸರ್ಕಾರ ಬೀಳಿಸಬೇಕಾದ್ರೆ 60 ಶಾಸಕರು ಬೇಕು. ಇಬ್ಬರಿಂದ ನಾಲ್ಕು ಶಾಸಕರನ್ನ ಕರೆದುಕೊಂಡು ಬರಲಿ. ಬಿಜೆಪಿಯ ಶಾಸಕರೇ ನಮ್ಮೊಂದಿಗಿದ್ದಾರೆ. ಜೆಡಿಎಸ್​ನವರು ಅತಂತ್ರರಾಗಿದ್ದಾರೆ ಎಂದು ತಿಳಿಸಿದರು.

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೊಡ್ಡವರೇ ನಮ್ಮ ಹಿಂದೆ ಇದ್ದಾರೆ ಎಂಬ ದೇವರಾಜೇಗೌಡ ಹೇಳಿಕೆ‌ ವಿಚಾರವಾಗಿ ಪ್ರತಿಕ್ರಿಯಿಸಿ, ಈಗ ಎಸ್​​ಐಟಿ‌ ರಚನೆ ಆಗಿದೆ. ಸಚಿವನಾಗಿ ನಾನು ಏನನ್ನೂ ಮಾತನಾಡಲು ಬಯಸಲು ಒಪ್ಪಲ್ಲ. ಎಸ್​​ಐಟಿ ತನ್ನ ಕೆಲಸ ಮಾಡುತ್ತೆ ಎಂದರು.

ಪ್ರಜ್ವಲ್ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಅಂತ ಹೆಚ್​ಡಿಕೆ ರಾಜ್ಯಪಾಲರ ಭೇಟಿ ವಿಚಾರವಾಗಿ ಮಾತನಾಡಿ, ಕ್ಲೀನ್ ಚೀಟ್ ಕೊಡೋಕಾ?. ವಾಷಿಂಗ್ ಮಷನ್​​ಗೆ ಹಾಕೋಕಾ? ಎಂದು ಲೇವಡಿ ಮಾಡಿದರು. ರಾಜ್ಯದಲ್ಲಿ ನಾವು ಕನಿಷ್ಠ 20 ಸ್ಥಾನ ಗೆಲ್ಲಲಿದ್ದೇವೆ. ಊಹೆ ಮಾಡಲಾರದಷ್ಟು ಅಂಡರ್ ಕರೆಂಟ್ ಆಗಿದೆ. ಮಹಿಳೆಯರು, ಬಡ ಕುಟುಂಬದವರು ಕಾಂಗ್ರೆಸ್​ಗೆ ಒಲವು ತೋರಿಸಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ ನಾವು ಗೆಲ್ಲುತ್ತೇವೆ. ಒಂದು ಲಕ್ಷ ಲೀಡ್​​ನಲ್ಲಿ ನಾವು ಜಯ ಗಳಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

WhatsApp Group Join Now
Telegram Group Join Now
Share This Article