ರೇಣುಕಾಸ್ವಾಮಿ ಹತ್ಯೆ ಕೃತ್ಯದಲ್ಲಿ ಪೊಲೀಸರೂ ಶಾಮೀಲಾಗಿರುವ ಅನುಮಾನ ವ್ಯಕ್ತ

Ravi Talawar
ರೇಣುಕಾಸ್ವಾಮಿ ಹತ್ಯೆ ಕೃತ್ಯದಲ್ಲಿ ಪೊಲೀಸರೂ ಶಾಮೀಲಾಗಿರುವ ಅನುಮಾನ ವ್ಯಕ್ತ
WhatsApp Group Join Now
Telegram Group Join Now

ಬೆಂಗಳೂರು, ಜೂನ್ 13: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಗ್ಯಾಂಗ್ ಈಗಾಗಲೇ ಜೈಲುಪಾಲಾಗಿದೆ. ಕೊಲೆಗೆ ಸಂಬಂಧಿಸಿ ದಿನಕ್ಕೊಂದು ಮಾಹಿತಿ ಬೆಳಕಿಗೆ ಬರುತ್ತಿದೆ.

ಈ ಮಧ್ಯೆ, ಕೃತ್ಯದಲ್ಲಿ ಪೊಲೀಸರೂ ಶಾಮೀಲಾಗಿರುವ ಅನುಮಾನ ವ್ಯಕ್ತವಾಗಿದೆ. ಅಲ್ಲದೆ, ದರ್ಶನ್ ಮತ್ತು 13ನೇ ಆರೋಪಿ ದೀಪಕ್​​ನನ್ನು ಪ್ರಕರಣದಿಂದ ಬಚಾವ್ ಮಾಡಲು 5 ಕೋಟಿ ರೂಪಾಯಿಗೆ ಡೀಲ್​ ನಡೆಸಲು ಮುಂದಾಗಿದ್ದರು ಎಂಬ ಆರೋಪ ಇದೀಗ ಕೇಳಿ ಬಂದಿದೆ.ಇಷ್ಟೇ ಅಲ್ಲದೆ, ಪಿಎಸ್​ಐಯೊಬ್ಬರ ಸೂಚನೆ ಮೇರೆಗೆ ಶವವನ್ನು ಕಾಮಾಕ್ಷಿಪಾಳ್ಯಕ್ಕೆ ಕೊಂಡೊಯ್ದು ಅಲ್ಲಿ ಎಸೆಯಲಾಗಿತ್ತು ಎನ್ನಲಾಗಿದೆ.

ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆಯಲ್ಲಿರುವ ದರ್ಶನ್ ಹಾಗೂ ಇತರ ಆರೋಪಿಗಳನ್ನು ಸ್ವತಃ ಪೊಲೀಸರೇ ರಕ್ಷಣೆ ಮಾಡುತ್ತಿದ್ದಾರೆಯೇ ಎಂಬ ಅನುಮಾನ ಈಗ ಬಲವಾಗಿದೆ.

ಠಾಣೆಯ ಇಡೀ ಕಟ್ಟಡಕ್ಕೆ ಸುತ್ತಲೂ ಶಾಮಿಯಾನ ಹಾಕಿಸಿದ ಸಿಬ್ಬಂದಿ, ಒಳಗಡೆ ಏನು ನಡೆಯುತ್ತಿದೆ ಎಂಬುದನ್ನು ಹೊರಗಿನವರಿಗೆ ತಿಳಿಯದಂತೆ ಮಾಡಿದ್ದಾರೆ. ಠಾಣೆಯ ಕಾಪೌಂಡ್ ಅಷ್ಟೇ ಅಲ್ಲದೆ, ಇಡೀ ಕಟ್ಟಡಕ್ಕೆ ಶಾಮಿಯಾನ ಹಾಕಲಾಗಿದೆ. ಕಟ್ಟಡದ 2ನೇ ಫ್ಲೋರ್​ನಲ್ಲೂ ಶಾಮಿಯಾನ ಹಾಕಿ ಕವರ್ ಮಾಡಲಾಗಿದೆ.

WhatsApp Group Join Now
Telegram Group Join Now
Share This Article