ಜಮ್ಮು -ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ನೀಡಬೇಕು: ಮೋದಿಗೆ ಒಮರ್‌ ಬೇಡಿಕೆ

Ravi Talawar
ಜಮ್ಮು -ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ನೀಡಬೇಕು: ಮೋದಿಗೆ ಒಮರ್‌ ಬೇಡಿಕೆ
WhatsApp Group Join Now
Telegram Group Join Now

ಕತ್ರಾ, ಜೂ.7: ಪ್ರಧಾನಿ ಮೋದಿ  ಅವರು ನೆನ್ನೆ ಶುಕ್ರವಾರ (ಜೂ.6) ರಂದು ಕಾಶ್ಮೀರಕ್ಕೆ ಭೇಟಿ ನೀಡಿದ್ದು, ಚೆನಾಬ್ ಸೇತುವೆಯನ್ನು ಉದ್ಘಾಟಿಸಿದ್ದಾರೆ. ಇದರ ನಂತರ ಪ್ರಧಾನಿ ಕತ್ರಾ-ಶ್ರೀನಗರ ವಂದೇ ಭಾರತ್ ಎಕ್ಸ್‌ಪ್ರೆಸ್​​​ಗೆ ಚಾಲನೆ ನೀಡಿದ್ದಾರೆ. ಈ ವೇಳೆ ಸಭಾ ಕಾರ್ಯಕ್ರಮವನ್ನು ಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪ್ರಧಾನಿ ಸೇರಿದಂತೆ ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ (Omar Abdullah) ಕೂಡ ಭಾಗವಹಿಸಿದರು. ಈ ವೇಳ ಜಮ್ಮು -ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ನೀಡಬೇಕು ಎಂದು ಹೇಳಿದರು. ಪ್ರಧಾನಿ ಮೋದಿಯ ಮುಂದೆ ಈ ಬೇಡಿಕೆಯನ್ನು ಸೂಕ್ಷ್ಮವಾಗಿ ಇಟ್ಟಿದ್ದಾರೆ. ಈ ವೇಳೆ 2014ರಲ್ಲಿ ತಮ್ಮ ಮೊದಲ ಸರ್ಕಾರದ ಕೊನೆಯ ಕಾರ್ಯಕ್ರಮವಾದ ಕತ್ರಾ ರೈಲು ನಿಲ್ದಾಣದ ಉದ್ಘಾಟನೆಯನ್ನು ನೆನಪಿಸಿಕೊಂಡ ಮುಖ್ಯಮಂತ್ರಿ ಅಬ್ದುಲ್ಲಾ, ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ನಾಲ್ವರು ಜನರು ಕೂಡ ವೇದಿಕೆಯಲ್ಲಿರುವುದು ಕಾಕತಾಳೀಯ ಎಂದು ಹೇಳಿದ್ದಾರೆ.

WhatsApp Group Join Now
Telegram Group Join Now
Share This Article