ಸಚಿವ ಸ್ಥಾನಕ್ಕೆ ಪರಿಗಣಿಸಿಲ್ಲ ಎಂದು ಬಿಜೆಪಿ ಹೈಕಮಾಂಡ್ ವಿರುದ್ಧ ಜಿಗಜಿಣಗಿ ಅಸಮಾಧಾನ

Ravi Talawar
ಸಚಿವ ಸ್ಥಾನಕ್ಕೆ ಪರಿಗಣಿಸಿಲ್ಲ ಎಂದು ಬಿಜೆಪಿ ಹೈಕಮಾಂಡ್ ವಿರುದ್ಧ ಜಿಗಜಿಣಗಿ ಅಸಮಾಧಾನ
WhatsApp Group Join Now
Telegram Group Join Now

ವಿಜಯಪುರ, ಜುಲೈ 9: ಬಿಜೆಪಿ ಸೇರಬೇಡಿ ಎಂದು ಬಹಳ ಜನ ದಲಿತರು ವಾದ ಮಾಡಿದ್ದರು. ಆದರೂ ಬೆಂಬಲ ಕೊಟ್ಟಿದ್ದಾರೆ. ದಲಿತನಾಗಿ ದಕ್ಷಿಣ ಭಾರತದಲ್ಲಿ ಬಿಜೆಪಿಯಿಂದ ಏಳು ಚುನಾವಣೆಗಳಲ್ಲಿ ಗೆದ್ದು ಬಂದ ಏಕೈಕ ಸಂಸದನಾದರೂ ಸಚಿವ ಸ್ಥಾನಕ್ಕೆ ಪರಿಗಣಿಸಿಲ್ಲ ಎಂದು ಹೈಕಮಾಂಡ್ ವಿರುದ್ಧ ವಿಜಯಪುರ ಸಂಸದ ರಮೇಶ ಜಿಗಜಿಣಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಿಜಯಪುರ ನಗರದಲ್ಲಿ ಸಂಸದರ‌ ಕಚೇರಿ‌ ಉದ್ಘಾಟನೆ ಹಾಗೂ ಪೂಜೆ ನೆರವೇರಿಸಿ ಮಾತನಾಡಿದ ಅವರು, ನನಗೆ ಮಂತ್ರಿಸ್ಥಾನ ನೀಡುವ ಅವಶ್ಯಕತೆ ಇಲ್ಲ ಎಂದು ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದರು. ನನಗೆ ಅವಶ್ಯಕತೆ ಇರುವುದು ಜನರದ್ದು‌. ನಾನು ದೆಹಲಿಯಿಂದ ವಿಜಯಪುರಕ್ಕೆ ಮರಳಿದಾಗ ಜನ ನನಗೆ ‘ಥೂ’ ಎಂದು ಬೈದಿದ್ದರು ಎಂದರು.

‘ನಾವು ನಿಮಗೆ ಮೊದಲೇ ಹೇಳಿದ್ದೆವು, ಈ ಪಕ್ಷ ದಲಿತರ ವಿರೋಧಿ. ಬಿಜೆಪಿ ಪಕ್ಷ ಸೇರಬೇಡಿ’ ಎಂದು ಬಹಳ ಜನ ದಲಿತರು ವಾದ ಮಾಡಿದ್ದರು. ನನಗೋಸ್ಕರ ಅಲ್ಲದಿದ್ದರೂ ಜನರ ಒತ್ತಡವಂತೂ ಇದೆ. ಇದು ಎಂತಹ ನ್ಯಾಯ? ನೀವೇ ಹೇಳಿ. ದಲಿತನಾಗಿ ದಕ್ಷಿಣ ಭಾರತದಲ್ಲಿ ಬಿಜೆಪಿಯಿಂದ ಏಳು ಚುನಾವಣೆಗಳಲ್ಲಿ ನಾನೊಬ್ಬನೇ ಗೆದ್ದು ಬಂದೆ. ಎಲ್ಲ ಮೇಲ್ವರ್ಗದ ಜಾತಿಯವರು ಸಚಿವರಾಗಿದ್ದಾರೆ. ದಲಿತರೇನು ಬಿಜೆಪಿಗೆ ಬೆಂಬಲ ನೀಡಿಲ್ಲವೇ ಎಂದು ಜಿಗಜಿಣಗಿ‌ ಪ್ರಶ್ನಿಸಿದರು. ಈ ವಿಚಾರದಲ್ಲಿ ನನಗೆ ಮನಸ್ಸಿಗೆ ತುಂಬಾ ನೋವಿದೆ ಎಂದರು.

 

WhatsApp Group Join Now
Telegram Group Join Now
Share This Article