ಸುಮಂಗಳಮ್ಮ ಸ್ಮಾರಕ ಮಹಿಳಾ ಮಹಾವಿದ್ಯಾಲಯ ವಿದ್ಯಾರ್ಥಿನಿ ಕಂದಿಬೆಡಲ ದೆಹಲಿಯಲ್ಲಿ ನಡೆಯಲಿರುವ  ಧ್ವಜಾರೋಹಣದಲ್ಲಿ ಭಾಗಿ

Ravi Talawar
ಸುಮಂಗಳಮ್ಮ ಸ್ಮಾರಕ ಮಹಿಳಾ ಮಹಾವಿದ್ಯಾಲಯ ವಿದ್ಯಾರ್ಥಿನಿ ಕಂದಿಬೆಡಲ ದೆಹಲಿಯಲ್ಲಿ ನಡೆಯಲಿರುವ  ಧ್ವಜಾರೋಹಣದಲ್ಲಿ ಭಾಗಿ
WhatsApp Group Join Now
Telegram Group Join Now

ಬಳ್ಳಾರಿ  ಆ 06  ಶ್ರೀಮತಿ ಅಲ್ಲಂ ಸುಮಂಗಳಮ್ಮ ಸ್ಮಾರಕ ಮಹಿಳಾ ಮಹಾವಿದ್ಯಾಲಯ ಬಳ್ಳಾರಿ, ಎನ್.ಎಸ್.ಎಸ್ ಘಟಕಗಳಿಂದ ಕು. ಕಂದಿಬೆಡಲ ಸಾಹಿತಿ ಬಿ.ಎಸ್ಸಿ ೬ನೇ ಸೆಮಿಸ್ಟರ್ ವಿದ್ಯಾರ್ಥಿನಿ ಇವರು ೧೫-೦೮-೨೦೨೪ ರಂದು ದೆಹಲಿಯಲ್ಲಿ ನಡೆಯುವ ೭೮ ನೇ ಸ್ವಾತಂತ್ರö್ಯ ದಿನಾಚರಣೆಯ ಅಂಗವಾಗಿ ಪ್ರಧಾನ ಮಂತ್ರಿಯವರ ವಿಶೇಷ ಅತಿಥಿಯಾಗಿ ಭಾಗವಹಿಸುವರು.

ಈ ಸಂಗತಿ ನಮ್ಮ ಮಹಾವಿದ್ಯಾಲಯಕ್ಕೆ ಹೆಮ್ಮೆಯ ವಿಷಯವಾಗಿದೆ. ವೀರಶೈವ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ  ಅಲ್ಲಂ ಗುರುಬಸವರಾಜ, ಉಪಾಧ್ಯಕ್ಷರಾದ  ಜಾನೇಕುಂಟೆ ಬಸವರಾಜ, ಕಾರ್ಯದರ್ಶಿಗಳಾದ ಸನ್ಮಾನ್ಯ ಡಾ. ಅರವಿಂದ ಪಾಟೀಲ್, ಸಹಕಾರ್ಯದರ್ಶಿಗಳಾದ ಶ್ರೀ ಯಾಳ್ಪಿ ಮೇಟಿಪಂಪನಗೌಡ, ಕೋಶಾಧಿಕಾರಿಗಳಾದ ಬೈಲುವದ್ಧಿಗೇರಿ ರ‍್ರಿಸ್ವಾಮಿ, ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಕಾತ್ಯಾಯಿನಿ ಎಂ. ಮರಿದೇವಯ್ಯ, ಮಹಾವಿದ್ಯಾಲಯದ ಪ್ರಾಂಶುಪಾಲರಾದ ಶ್ರೀಮತಿ ಹೆಚ್.ರತ್ನ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಹರ್ಷವನ್ನು ವ್ಯಕ್ತಪಡಿಸಿದರು.

ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ  ಎಂ. ಮರಿದೇವಯ್ಯರವರು ಮಹಾವಿದ್ಯಾಲಯದ ಎಲ್ಲಾ ವಿದ್ಯಾರ್ಥಿನಿಯರಿಗೆ ಈ ವಿಷಯ ಪ್ರೇರಣೆಯಾಗಿದೆೆ. ಇದೇ ರೀತಿ ವಿದ್ಯಾರ್ಥಿನಿಯರು ಮಹಾವಿದ್ಯಾಲಯದ ಚಟುವಟಿಕೆಗಳಲ್ಲಿ ಭಾಗವಹಿಸಿ ಕೀರ್ತಿಯನ್ನು ಹೆಚ್ಚಿಸಬೇಕು ಎಂದು ತಿಳಿಸಿದರು.

WhatsApp Group Join Now
Telegram Group Join Now
Share This Article