ಇಂದಿನಿಂದ 5 ದಿನಗಳ ಕಾಲ ‘ಕಾವೇರಿ ಆರತಿ

Ravi Talawar
ಇಂದಿನಿಂದ 5 ದಿನಗಳ ಕಾಲ ‘ಕಾವೇರಿ ಆರತಿ
WhatsApp Group Join Now
Telegram Group Join Now

ಮಂಡ್ಯ, ಸೆಪ್ಟೆಂಬರ್​ 26: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ KRS ಜಲಾಶಯದ ಬೋಟಿಂಗ್​ ಪಾಯಿಂಟ್​ನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಕನಸಿನ ಕಾರ್ಯಕ್ರಮ ‘ಕಾವೇರಿ ಆರತಿ’ಗೆ ಇಂದು ಚಾಲನೆ ಸಿಗಲಿದೆ.  5 ದಿನಗಳ ಕಾಲ ಸಾಂಕೇತಿಕವಾಗಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ.  ಸಂಜೆ 6 ಗಂಟೆಗೆ ಡಿಸಿಎಂ ಡಿಕೆಶಿ ಕಾವೇರಿ ಆರತಿಗೆ ಚಾಲನೆ ನೀಡಲಿದ್ದು, ಕಾವೇರಿ ನದಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ತರಬೇತಿ ಪಡೆದಿರುವ ಸ್ಥಳೀಯ ಪುರೋಹಿತರಿಂದಲೇ ಕಾರ್ಯಕ್ರಮ ನಡೆಯಲಿದ್ದು, ಗಂಗಾರತಿ ಮಾದರಿಯಲ್ಲಿಯೇ ಕಾವೇರಿ ಆರತಿ ಇರಲಿದೆ. 12-13 ಜನರನ್ನೊಳಗೊಂಡ ವೈದಿಕರ ತಂಡ ಕಾರ್ಯಕ್ರಮದ ನೇತೃತ್ವ ವಹಿಸಲಿದೆ. ಇನ್ನು ರಾಜ್ಯ, ಹೊರರಾಜ್ಯ ಸೇರಿದಂತೆ ಕಾರ್ಯಕ್ರಮಕ್ಕೆ ಸುಮಾರು 8 ಸಾವಿರಕ್ಕೂ ಹೆಚ್ಚು ಜನ ಬರುವ ನಿರೀಕ್ಷೆ ಇದೆ. ಕೆಆರ್‌ಎಸ್ ಬೃಂದಾವನಕ್ಕೆ ಬರುವ ಪ್ರವಾಸಿಗರಿಗೆ ಉಚಿತ ಪ್ರವೇಶ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ. ಜೊತೆಗೆ ಕಾರ್ಯಕ್ರಮದ ಐದೂ ದಿನಗಳ ಕಾಲ ಟೋಲ್ ಸಂಗ್ರಹದಲ್ಲೂ ಪ್ರವಾಸಿಗರಿಗೆ ವಿನಾಯಿತಿ ಇರಲಿದೆ.

WhatsApp Group Join Now
Telegram Group Join Now
Share This Article