ಬೆಂಗಳೂರು : ಹಿರಿಯ ವಕೀಲರು ಹಾಗೂ ವಕೀಲರ ಸಂಘದ ಮಾಜಿ ಅಧ್ಯಕ್ಷರೂ ಆಗಿದ್ದ ಕೆ ಎನ್ ಪುಟ್ಟೇಗೌಡ (71) ವಿಧಿವಶರಾಗಿದ್ದಾರೆ.
ಅತ್ಯಂತ ಅಪರೂಪದ ಮೋಟಾರ್ ನ್ಯೂರಾನ್ ಖಾಯಿಲೆಯಿಂದ ಬಳಲುತ್ತಿದ್ದ ಅವರು, ಹಲವು ತಿಂಗಳುಗಳಿಂದ ವಿಶ್ರಾಂತಿಯಲ್ಲಿದ್ದರು. ವಿಜಯನಗರದ ತಮ್ಮ ನಿವಾಸದಲ್ಲಿ ಬುಧವಾರ ಬೆಳಗಿನ ಜಾವ 2 ಗಂಟೆಗೆ ಕೊನೆಯುಸಿರೆಳೆದರು. ಮೃತರ ಇಬ್ಬರು ಪುತ್ರಿಯರು ಮತ್ತು ಪತ್ನಿಯನ್ನು ಅಗಲಿದ್ದಾರೆ. ಮೃತರ ಪಾರ್ಥಿವ ಶರೀರವನ್ನು ಆದಿಚುಂಚನಗಿರಿ ಮಠಕ್ಕೆ ಅಥಾವ ಬಿಜಿಎಸ್ ಆಸ್ಪತ್ರೆಗೆ ದಾನ ಮಾಡಲು ಕುಟುಂಬಸ್ಥರು ನಿರ್ಧರಿಸಿದ್ದಾರೆ.
ಇಂದು ಮಧ್ಯಾಹ್ನ 3 ಗಂಟೆಯವರೆಗೂ ಮೃತರ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರ ದರ್ಶನದ ಬಳಿಕ ಪಾರ್ಥಿವ ಶರೀರವನ್ನು ಆಸ್ಪತ್ರೆಗೆ ಹಸ್ತಾಂತರ ಮಾಡುವುದಾಗಿ ಪುಟ್ಟೇಗೌಡರ ಕುಟುಂಬದ ಮೂಲಗಳು ತಿಳಿಸಿವೆ.