ಬೆಳಗಾವಿಯಲ್ಲಿ ಬಿಜೆಪಿಯ 12 ಮಂದಿ ಸಭೆ ನಡೆಸಿರುವುದು ಆಘಾತ: ಕೆ.ಎಸ್.ಈಶ್ವರಪ್ಪ

Ravi Talawar
ಬೆಳಗಾವಿಯಲ್ಲಿ ಬಿಜೆಪಿಯ 12 ಮಂದಿ ಸಭೆ ನಡೆಸಿರುವುದು ಆಘಾತ: ಕೆ.ಎಸ್.ಈಶ್ವರಪ್ಪ
WhatsApp Group Join Now
Telegram Group Join Now
ಕೆ.ಎಸ್.ಈಶ್ವರಪ್ಪ ಸುದ್ದಿಗೋಷ್ಠಿ (ETV Bharat)

ಶಿವಮೊಗ್ಗ: ”ನಿನ್ನೆ ಬಿಜೆಪಿಯ 12 ನಾಯಕರು ಬೆಳಗಾವಿಯಲ್ಲಿ ಸಭೆ ನಡೆಸಿದ್ದು, ನನಗೆ ಅಘಾತ ಉಂಟುಮಾಡಿದೆ” ಎಂದು ಮಾಜಿ ಡಿಸಿಎಂ ಹಾಗೂ ರಾಷ್ಟ್ರಭಕ್ತರ ಬಳಗದ ಮುಖಂಡ ಕೆ.ಎಸ್.ಈಶ್ವರಪ್ಪ ತಿಳಿಸಿದರು.

ಶಿವಮೊಗ್ಗ ಪ್ರೆಸ್ ಟ್ರಸ್ಟ್​ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ”ನಿನ್ನೆ ಸಭೆ ನಡೆಸಿದವರು ಸಂಘಟನೆಯಲ್ಲಿದ್ದು, ಪಕ್ಷ ಕಟ್ಟಿದವರು. ಇವರು ಏನೇನು ನೋವು ಅನುಭವಿಸುದ್ದಾರೆ ಎಂಬುದನ್ನು ಹೇಳಿಲ್ಲ. ಪಾದಯಾತ್ರೆ ನಡೆಸುವುದಾಗಿ ಹೇಳಿದ್ದಾರೆ. ಸಭೆ ನಡೆಸಿದವರು ಕೇವಲ ಹನ್ನೆರಡು ಜನ ಮಾತ್ರ ಅಂತ ಕೇಂದ್ರದ ನಾಯಕರು ತಾತ್ಸಾರ ಮಾಡಬಾರದು. ಅವರು ಪಾದಯಾತ್ರೆ ನಡೆಸಿದರೆ ಗಲ್ಲಿ ಗಲ್ಲಿಗಳಲ್ಲಿ ಪಾರ್ಟಿ ಎರಡಾಗುತ್ತದೆ” ಎಂದರು.

”ಲೋಕಸಭೆ ಚುನಾವಣೆಯ ವೇಳೆಗೆ ವಿಜಯೇಂದ್ರರನ್ನು ಪಕ್ಷದ ಅಧ್ಯಕ್ಷರಾಗಿ ಮಾಡಿದ್ದು, ಎಲ್ಲರಿಗೂ ಅಚ್ಚರಿ ಉಂಟುಮಾಡಿತ್ತು. ಯಡಿಯೂರಪ್ಪ ಕುಟುಂಬದ ಕೈಗೆ ಅಧಿಕಾರ ನೀಡಿದ್ದಕ್ಕೆ ಲೋಕಸಭೆ ಚುನಾವಣೆಯಲ್ಲಿ ಬಜೆಪಿ 25 ಸೀಟಿನಿಂದ 17 ಸೀಟಿಗೆ ಇಳಿದಿದೆ” ಎಂದು ಟೀಕಿಸಿದರು.

WhatsApp Group Join Now
Telegram Group Join Now
Share This Article