ಕೆಂಪಣ್ಣ ಆಯೋಗದ ವರದಿ ಬಗ್ಗೆ ಸಂಪುಟದಲ್ಲಿ ಚರ್ಚಿಸಲಿ: ಕುಮಾರಸ್ವಾಮಿ

Ravi Talawar
ಕೆಂಪಣ್ಣ ಆಯೋಗದ ವರದಿ ಬಗ್ಗೆ ಸಂಪುಟದಲ್ಲಿ ಚರ್ಚಿಸಲಿ: ಕುಮಾರಸ್ವಾಮಿ
WhatsApp Group Join Now
Telegram Group Join Now

ಶಿವಮೊಗ್ಗ, ಸೆಪ್ಟೆಂಬರ್ 5: ಕೋವಿಡ್​ ಹಗರಣದ ತನಿಖಾ ವರದಿಯಲ್ಲಿ ಏನಿದೆ ಎಂಬುದು ಗೊತ್ತಿಲ್ಲ. ಸಂಪುಟದಲ್ಲಿ ಚರ್ಚೆಯಾಗಲಿದೆ ಎಂದು ಮಾಧ್ಯಮಗಳ ವರದಿಯಲ್ಲಿ ನೋಡಿದ್ದೇನೆ. ಕೆಂಪಣ್ಣ ಆಯೋಗದ ವರದಿ ಬಗ್ಗೆಯೂ ಸಂಪುಟದಲ್ಲಿ ಚರ್ಚಿಸಲಿ ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಹೇಳಿದರು. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಅದನ್ನು (ಕೆಂಪಣ್ಣ ಆಯೋಗದ ವರದಿ) ಏಕೆ ಕ್ಯಾಬಿನೆಟ್ ಮುಂದೆ ತರದೆ ಬಿಟ್ಟಿದ್ದಾರೆ ಎಂದು ಪ್ರಶ್ನಿಸಿದರು.

ನಾಡಿಗೆ ಅನೇಕ ಕೊಡುಗೆಗಳನ್ನು ಎನ್​​ಯು ಆಸ್ಪತ್ರೆ ಕೊಟ್ಟಿದೆ. ಶಿವಮೊಗ್ಗದಲ್ಲಿ ಹಲವಾರು ಕುಟುಂಗಳಿಗೆ ಯಶಸ್ವಿಯಾಗಿ ಕಿಡ್ನಿ‌ ಕಸಿ ಮಾಡಿದ್ದಾರೆ. ಶಿವಮೊಗ್ಗಕ್ಕೆ ಇಂತಹ‌ ಒಂದು ಆಸ್ಪತ್ರೆ ಅವಶ್ಯಕವಾಗಿತ್ತು. ಇಲ್ಲವಾದರೆ ಬೆಂಗಳೂರು ಅಥವಾ ಮಂಗಳೂರಿಗೆ ಆಸ್ಪತ್ರೆಗೆ ಹೋಗಬೇಕಿತ್ತು. ಇದೀಗ ಆ ಸೌಲಭ್ಯ ಶಿವಮೊಗ್ಗದಲ್ಲಿ ದೊರೆಯುತ್ತಿದೆ ಎಂದರು.

 

WhatsApp Group Join Now
Telegram Group Join Now
Share This Article