ಕಸ ವಿಲೇವಾರಿ ವಾಹನಗಳ ಲೋಕಾರ್ಪಣೆ, ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ನಾರಾ ಭರತ್ ರೆಡ್ಡಿ

Ravi Talawar
ಕಸ ವಿಲೇವಾರಿ ವಾಹನಗಳ ಲೋಕಾರ್ಪಣೆ, ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ನಾರಾ ಭರತ್ ರೆಡ್ಡಿ
WhatsApp Group Join Now
Telegram Group Join Now
ಬಳ್ಳಾರಿ, ಜೂ.24: ಬಳ್ಳಾರಿ ಮಹಾನಗರ ಪಾಲಿಕೆಯ ವತಿಯಿಂದ ಕಸ ಸಂಗ್ರಹಿಸುವ ವಿಲೇವಾರಿ ಮಾಡುವ 23 ನೂತನ ವಾಹನಗಳನ್ನು ಶಾಸಕ ನಾರಾ ಭರತ್ ರೆಡ್ಡಿ ಲೋಕಾರ್ಪಣೆಗೊಳಿಸಿದರು. ಮಂಗಳವಾರ ಬೆಳಿಗ್ಗೆ ನಲ್ಲಚೆರುವು ಪ್ರದೇಶದ ಕಸ ಸಂಗ್ರಹ ಘಟಕದ ಆವರಣದಲ್ಲಿ ಏರ್ಪಡಿಸಿದ್ದ ವಾಹನಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿದರು.
ಮೇಯರ್ ಮುಲ್ಲಂಗಿ ನಂದೀಶ್, ಉಪ ಮೇಯರ್ ಡಿ.ಕುಸುಂ, ಮಾಜಿ ಮೇಯರ್ ಎಂ.ರಾಜೇಶ್ವರಿ, ಸದಸ್ಯರುಗಳಾದ ಪ್ರಭಂಜನಕುಮಾರ್, ಪಿ.ಗಾದೆಪ್ಪ, ಕುಬೇರಾ, ಮಿಂಚು ಸೀನಾ, ನೂರ್ ಮೊಹಮ್ಮದ್, ಪದ್ಮರೋಜ, ಟಿ.ನಾಜು, ಕಾಂಗ್ರೆಸ್ ಮುಖಂಡರಾದ ಅಯಾಜ್ ಅಹ್ಮದ್, ಸುಬ್ಬರಾಯುಡು, ಚಂಪಾ ಚವ್ಹಾಣ್ ಸೇರಿದಂತೆ ಹಲವರು ಹಾಜರಿದ್ದರು.
*ವಿವಿಧ ಕಾಮಗಾರಿಗಳಿಗೆ ಚಾಲನೆ:* ಮಂಗಳವಾರ ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ವಾರ್ಡುಗಳಲ್ಲಿ ಏರ್ಪಡಿಸಿದ್ದ ಭೂಮಿ ಪೂಜೆ ಕಾರ್ಯಕ್ರಮಗಳಲ್ಲಿ ಶಾಸಕ ನಾರಾ ಭರತ್ ರೆಡ್ಡಿಯವರು ಭಾಗವಹಿಸಿದರು.
ವಾರ್ಡ್ ಸಂಖ್ಯೆ 3ರ ವ್ಯಾಪ್ತಿಯ ಬಂಡಿಮೋಟ್ ಮಸೀದಿ ಹಿಂಭಾಗ ಅಂದಾಜು ವೆಚ್ಚ 63 ಲಕ್ಷ 50 ಸಾವಿರ ರೂ.ಗಳ ವೆಚ್ಚದಲ್ಲಿ ಮಳೆ ನೀರು ಕಾಲುವೆಯ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಯಿತು.
ತದನಂತರ ವಾರ್ಡ್ ಸಂಖ್ಯೆ 13ರ ಮಿಲ್ಲರ್ ಪೇಟೆಯಲ್ಲಿ ಅಂದಾಜು ವೆಚ್ಚ 50 ಲಕ್ಷ ರೂ.ಗಳ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಲಾಯಿತು.
ಅದೇ ರೀತಿ ವಾರ್ಡ್ ಸಂಖ್ಯೆ 17ರ ವಿಶಾಲ ನಗರ – ಹನುಮಾನ ನಗರದಲ್ಲಿ ಅಂದಾಜು ವೆಚ್ಚ 31 ಲಕ್ಷ 83 ಸಾವಿರ ರೂ.ಗಳ ವೆಚ್ಚದಲ್ಲಿ ಕಾಮಗಾರಿಗೆ, ಅಂಜಿನಪ್ಪ ನಗರ ಹಾಗೂ ಬಿ.ಗೋನಾಳ್ ಗ್ರಾಮದ ಅಂಗನವಾಡಿ ನಿರ್ಮಾಣ ಕಾಮಗಾರಿಗಳಿಗೆ (ಅನುಕ್ರಮವಾಗಿ ಅಂದಾಜು 40 ಲಕ್ಷ ರೂ.ಗಳು, 20 ಲಕ್ಷ ರೂ.ಗಳ ವೆಚ್ಚ) ಚಾಲನೆ ನೀಡಲಾಯಿತು.
ಈ ಸಂದರ್ಭ ಪಾಲಿಕೆಯ ಸದಸ್ಯರುಗಳಾದ ಎಂ.ಪ್ರಭಂಜನಕುಮಾರ್, ಕಾಂಗ್ರೆಸ್ ಮುಖಂಡರಾದ ಹೊನ್ನಪ್ಪ, ಹಗರಿ ಗೋವಿಂದ ಸೇರಿದಂತೆ ಹಲವರು ಹಾಜರಿದ್ದರು.
 ಮಾಜಿ ಮೇಯರ್, ಪಾಲಿಕೆಯ ಸದಸ್ಯ ಸಿ.ಇಬ್ರಾಹಿಂಬಾಬು, ಕಾಂಗ್ರೆಸ್ಸಿನ ಕಣೇಕಲ್ ಮೆಹಬೂಬಸಾಬ, ಥಿಯೇಟರ್ ಶಿವು, ರಾಕಿ, ರಘು ಮೊದಲಾದವರು ಹಾಜರಿದ್ದರು
WhatsApp Group Join Now
Telegram Group Join Now
Share This Article