ಬಳ್ಳಾರಿ ಜೂ 11. ಡಾ ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ವತಿಯಿಂದ ದಾವಣಗೆರೆ ಜಿಲ್ಲೆ ಹೊನ್ನಳ್ಳಿಯ ಡಾ ಬಿ ಆರ್ ಅಂಬೇಡ್ಕರ್ ಭವನದಲ್ಲಿ 2022-23 ನೇ ಸಾಲಿನ ಚರ್ಮ ವಸ್ತುಗಳ 60 ದಿನಗಳ ತರಬೇತಿ ಪಡೆದ ಫಲಾನುಭವಿಗಳಿಗೆ ಸೌಲಭ್ಯ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಲಿಡ್ಕರ್ ಅಧ್ಯಕ್ಷ ಮುಂಡ್ರಿಗಿ ನಾಗರಾಜ್ ಮಾತನಾಡಿ ಲಿಡ್ಕರ್ ನಿಗಮದ ಯೋಜನೆಗಳ ಬಗ್ಗೆ ಮಾಹಿತಿ ನೀಡಿ, ಫಲಾನುಭವಿಗಳು ನಿಗಮದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕೆಂದು ಅಭಿಪ್ರಾಯ ಪಟ್ಟರು. ಈ ಸಂಧರ್ಭದಲ್ಲಿ ಹೊನ್ನಳ್ಳಿ ಶಾಸಕರಾದ ಡಿ.ಜಿ. ಶಾಂತನಗೌಡ, ಸಮಾಜ ಕಲ್ಯಾಣ ಇಲಾಖೆ ಉಪ ನೀರ್ದೇಶಕರಾದ ಮಲ್ಲಿಕಾರ್ಜುನ, ಲಿಡ್ಕರ್ ಜಿಲ್ಲಾ ಸಂಯೋಜಕರಾದ ವೆಂಕಟೇಶ್, ಮುಖಂಡರಾದ ರಾಜಪ್ಪ, ನವೀನ್, ಜಿ ಗೋವರ್ಧನ, ಫೋಟೊರಾಜ, ಸಣ್ಣನಾಗರಾಜ ಮತ್ತಿತರರು ಉಪಸ್ಥಿತರಿದ್ದರು.