ರಸ್ತೆ ಕಾಮಗಾರಿಗೆ ಸ್ಥಳೀಯ ಭೇಟಿ: ಶಾಸಕ ಬಿ. ವೆಂಕಟೇಶ ಪ್ರಸಾದ್ ಪರಿಶೀಲನೆ

MK HasiruKranti
ರಸ್ತೆ ಕಾಮಗಾರಿಗೆ ಸ್ಥಳೀಯ ಭೇಟಿ: ಶಾಸಕ ಬಿ. ವೆಂಕಟೇಶ ಪ್ರಸಾದ್ ಪರಿಶೀಲನೆ
WhatsApp Group Join Now
Telegram Group Join Now
ಬಳ್ಳಾರಿ:18.. ಗ್ರಾಮೀಣ ಅಭಿವೃದ್ಧಿಗೆ ಆದ್ಯತೆ ನೀಡುತ್ತಿರುವ ಜನಪ್ರಿಯ ನಾಯಕ ಹಾಗೂ ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಶಾಸಕ ಶ್ರೀ ಬಿ. ವೆಂಕಟೇಶ ಪ್ರಸಾದ್ ಅವರು ಮುಂಡರಗಿ ಗ್ರಾಮದಿಂದ ಮೀಂಚೇರಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಕಾಮಗಾರಿಯನ್ನು ಅಧಿಕಾರಿಗಳೊಂದಿಗೆ ಭೇಟಿ ನೀಡಿ ವೀಕ್ಷಣೆ ನಡೆಸಿದರು.
ಈ ಸಂದರ್ಭದಲ್ಲಿ ರಸ್ತೆ ಕಾಮಗಾರಿಯ ಪ್ರಗತಿ, ಗುಣಮಟ್ಟ ಹಾಗೂ ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸುವ ಕುರಿತು ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು. ಗ್ರಾಮಸ್ಥರಿಗೆ ಸುಗಮ ಸಂಚಾರ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ನಡೆಯಬಾರದು ಎಂದು ಅವರು ಖಡಕ್ ಎಚ್ಚರಿಕೆ ನೀಡಿದರು.
ರಸ್ತೆ ಅಭಿವೃದ್ಧಿಯಿಂದ ಸ್ಥಳೀಯ ಜನರಿಗೆ ಅನುಕೂಲವಾಗುವುದಲ್ಲದೆ, ಕೃಷಿ ಹಾಗೂ ವ್ಯಾಪಾರ ಚಟುವಟಿಕೆಗಳಿಗೆ ಸಹ ಸಹಾಯವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದು, ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ಮನವಿ ಮಾಡಿದರು.
WhatsApp Group Join Now
Telegram Group Join Now
Share This Article