ಬೆಂಗಳೂರು: ಇಂದು ಬೆಳ್ಳಂಬೆಳ್ಳಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ನೀಡಿದೆ. ರಾಜ್ಯದ 10 ಕಡೆಗಳಲ್ಲಿ ಏಕಕಾಲದಲ್ಲಿ ಹಲವು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ಮಾಡಿರುವ ಲೋಕಾಯುಕ್ತ ಅಧಿಕಾರಿಗಳು, ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು (ಎಲೆಕ್ಟ್ರಾನಿಕ್ ಸಿಟಿ) – RTO ಸೂಪರಿಂಟೆಂಡೆಂಟ್ ಕುಮಾರಸ್ವಾಮಿ
ಮಂಡ್ಯ – ನಗರ ಪಾಲಿಕೆ CAO ಪುಟ್ಟಸ್ವಾಮಿ
ಬೀದರ್ – ಕೃಷ್ಣಾ ಮೇಲ್ದಂಡೆ ಯೋಜನೆ ಮುಖ್ಯ ಇಂಜಿನಿಯರ್ ಪ್ರೇಮ್ ಸಿಂಗ್
ಮೈಸೂರು – ಹೂಟಗಳ್ಳಿ ನಗರ ಪಾಲಿಕೆ ರೆವಿನ್ಯೂ ಇನ್ಸ್ಪೆಕ್ಟರ್ ರಾಮಸ್ವಾಮಿ ಸಿ
ಧಾರವಾಡ – ಕರ್ನಾಟಕ ವಿವಿಯ ಸಹ ಪ್ರಾಧ್ಯಾಪಕ ಸುಭಾಶ್ ಚಂದ್ರ
ಧಾರವಾಡ – ಪ್ರಾ.ಪಶು ಕ್ಲಿನಿಕ್ ಹುಲಿಗೋಲ್ ಹಿರಿಯ ಪರೀಕ್ಷಕ ಸತೀಶ್
ಶಿವಮೊಗ್ಗ – SIMS ಮೆಡಿಕಲ್ ಕಾಲೇಜಿನ FDA ಲಕ್ಷ್ಮೀಪತಿ ಸಿ.ಎನ್
ದಾವಣಗೆರೆ – APMC ಸಹ ನಿರ್ದೇಶಕ ಪ್ರಭು ಜೆ.
ಮೈಸೂರು – ಮಡಿಕೇರಿ PWD, ಸ.ಅ. ಇಂಜಿನಿಯರ್ ಗಿರೀಶ್ ಡಿ.ಎಂ
ಹಾವೇರಿ – ಶೇಕಪ್ಪ, ಇಇ, ಯೋಜನಾ ನಿರ್ದೇಶಕ ಕಚೇರಿ ಹಾವೇರಿ
ಈ ಎಲ್ಲ ಅಧಿಕಾರಿಗಳಿಗೆ ಸಂಬಂಧಿಸಿದೆ ಎನ್ನಲಾದ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು, ಸದ್ಯ ಪರಿಶೀಲನೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.


