ಉತ್ತರಾಖಂಡದ ಕೇದಾರನಾಥನಲ್ಲಿ MI-17 ಹೆಲಿಕಾಪ್ಟರ್ ಪತನ

Ravi Talawar
ಉತ್ತರಾಖಂಡದ ಕೇದಾರನಾಥನಲ್ಲಿ MI-17 ಹೆಲಿಕಾಪ್ಟರ್ ಪತನ
WhatsApp Group Join Now
Telegram Group Join Now

ಉತ್ತರಾಖಂಡ, ಆ.31: MI-17 ಹೆಲಿಕಾಪ್ಟರ್ ಉತ್ತರಾಖಂಡದ ಕೇದಾರನಾಥನಲ್ಲಿ ಪತನಗೊಂಡಿದೆ. ಉತ್ತರಾಖಂಡದ ಕೇದಾರನಾಥದಿಂದ ಗೌಚಾರ್‌ಗೆ ಏರ್ಲಿಫ್ಟ್ ಮಾಡಲಾಗುತ್ತಿದ್ದ ವೇಳೆ ಈ ದುರಂತ ನಡೆದಿದೆ. ಹೆಲಿಕಾಪ್ಟರ್ ಇಂದು ಬೆಳಿಗ್ಗೆ ಆಕಸ್ಮಿಕ ತಾಂತ್ರಿಕ ದೋಷದಿಂದ ಪತನಗೊಂಡಿದೆ ಎಂದು ಹೇಳಲಾಗಿದೆ. ಈ ಬಗ್ಗೆ ವಿಡಿಯೋವೊಂದು ಕೂಡ ವೈರಲ್​​ ಆಗಿದೆ. ಖಾಸಗಿ ಕಂಪನಿಯೊಂದು ನಿರ್ವಹಿಸುತ್ತಿದ್ದ ಹೆಲಿಕಾಪ್ಟರ್ ಲಿಂಚೋಲಿಯ ಮಂದಾಕಿನಿ ನದಿಯ ಬಳಿ ಪತನಗೊಂಡಿದೆ.

ಪತನಗೊಂಡ ಹೆಲಿಕಾಪ್ಟರ್ ಈ ಹಿಂದೆ ಕೇದಾರನಾಥ ದೇವಸ್ಥಾನಕ್ಕೆ ಪ್ರಯಾಣಿಕರನ್ನು ಸಾಗಿಸುವಲ್ಲಿ ತೊಡಗಿಸಿಕೊಂಡಿತ್ತು. ಇನ್ನು ಕೇದಾರನಾಥದಲ್ಲಿ ಭಾರೀ ಮಳೆಯಿಂದ ಚಾರಣ ಮಾರ್ಗ ಹಾನಿಯಾಗಿದೆ. ಜುಲೈ 31 ರಿಂದ ಕೇದಾರನಾಥಕ್ಕೆ ಹೋಗುವ ಯಾತ್ರಾರ್ಥಿಗಳ ಸಂಖ್ಯೆಯಲ್ಲಿ ತೀವ್ರ ಕುಸಿತ ಕಂಡಿದೆ ಎಂದು ಹೇಳಲಾಗಿದೆ.

WhatsApp Group Join Now
Telegram Group Join Now
Share This Article