ದೇವನಹಳ್ಳಿ, ಜೂನ್ 30: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಸೆಲ್ಫಿ ವಿಡಿಯೋ ಮಾಡಿ ವಿಷಸೇವಿಸಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಗೋಕರೆ ಗ್ರಾಮದಲ್ಲಿ ನಡೆದಿದೆ. ಸುಬ್ರಹ್ಮಣಿ(38) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.
ಜನ ಫೈನಾನ್ಸ್ ಬ್ಯಾಂಕ್ನಲ್ಲಿ ಸುಬ್ರಹ್ಮಣಿ 5 ಲಕ್ಷ ರೂ ಲೋನ್ ಪಡೆದಿದ್ದರು. ಇತ್ತೀಚಿಗೆ ಕಂತು ಡ್ಯೂ ಇದ್ದಿದ್ದಕ್ಕೆ ಮನೆ ಜಪ್ತಿ ಮಾಡುವುದಾಗಿ ಬ್ಯಾಂಕ್ನಿಂದ ನೋಟಿಸ್ ಜಾರಿ ಮಾಡಿದ್ದರು. ಹೀಗಾಗಿ ನನ್ನ ಸಾವಿಗೆ ಜನ ಫೈನಾನ್ಸ್ ಬ್ಯಾಂಕ್ ಕಾರಣ ಅಂತಾ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿದ್ದಾರೆ. ಜನ ಫೈನಾನ್ಸ್ ಬ್ಯಾಂಕ್ ವಿರುದ್ಧ ಮೃತನ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.