ಉಗ್ರರು ಭಾರತ ಗಡಿ ಒಳನುಸುಳಲು ಯತ್ನ; ಸೈನಿಕ ಹುತಾತ್ಮ

Ravi Talawar
ಉಗ್ರರು ಭಾರತ ಗಡಿ ಒಳನುಸುಳಲು ಯತ್ನ; ಸೈನಿಕ ಹುತಾತ್ಮ
WhatsApp Group Join Now
Telegram Group Join Now

ಉರಿ, ಆಗಸ್ಟ್​ 13: ಆಪರೇಷನ್ ಸಿಂಧೂರ್ ಬಳಿಕ ಗಡಿಯಲ್ಲಿ ಮೊದಲ ಬಾರಿಗೆ ಉಗ್ರರು ಒಳನುಸುಳಲು ಯತ್ನಿಸಿರುವ ಘಟನೆ ಜಮ್ಮು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿ ಪ್ರದೇಶದಲ್ಲಿ ನಡೆದಿದೆ. ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಭಯೋತ್ಪಾದಕರ ಒಳನುಸುಳುವಿಕೆ ಪ್ರಯತ್ನವನ್ನು ಭಾರತೀಯ ಸೇನೆ ವಿಫಲಗೊಳಿಸಿದೆ. ಇದಾದ ಬಳಿಕ ಗುಂಡಿನ ಚಕಮಕಿ ನಡೆಯಿತು, ಘಟನೆಯಲ್ಲಿ ಓರ್ವ ಸೈನಿಕ ಹುತಾತ್ಮರಾಗಿದ್ದಾರೆ.ದಾಳಿಕೋರರನ್ನು ಪತ್ತೆಹಚ್ಚಲು ಪ್ರದೇಶದಲ್ಲಿ ಒಳನುಸುಳುವಿಕೆ ನಿಗ್ರಹ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ. ಗುಂಡಿನ ಚಕಮಕಿ ನಡೆಯುತ್ತಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಾರತ ನಡೆಸಿದ ವಾಯುದಾಳಿಗಳು ಮತ್ತು ಭಾರತದ ಪಶ್ಚಿಮ ಗಡಿಯಲ್ಲಿ ಪಾಕಿಸ್ತಾನದ ಡ್ರೋನ್ ದಾಳಿಗಳ ನಂತರ, ಎರಡೂ ದೇಶಗಳು ಕದನ ವಿರಾಮಕ್ಕೆ ಒಪ್ಪಿಕೊಂಡಿದ್ದವು.

WhatsApp Group Join Now
Telegram Group Join Now
Share This Article