ಕಲಬೆರಕೆ ಆಹಾರ ನೀಡುವ ಹೋಟೆಲ್​ಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ: ಸಚಿವ ದಿನೇಶ್ ಗುಂಡೂರಾವ್

Ravi Talawar
ಕಲಬೆರಕೆ ಆಹಾರ ನೀಡುವ ಹೋಟೆಲ್​ಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ: ಸಚಿವ ದಿನೇಶ್ ಗುಂಡೂರಾವ್
WhatsApp Group Join Now
Telegram Group Join Now

ಮಂಗಳೂರು, ಆಗಸ್ಟ್ 30: ಆಹಾರ ಸುರಕ್ಷತೆ ತಪಾಸಣೆಗೆ ಆಹಾರ ಇಲಾಖೆ ರಾಜ್ಯದಾದ್ಯಂತ ಎರಡು‌ ದಿನಗಳ ವಿಶೇಷ ಆಂದೋಲನ ಹಮ್ಮಿಕೊಂಡಿರುವ ಬಗ್ಗೆ ಆರೋಗ್ಯ ಮತ್ತು ಆಹಾರ ಸುರಕ್ಷತಾ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದರು. ಮಂಗಳೂರಿನಲ್ಲಿ ಮಾತನಾಡಿದ ಅವರು, ಇಡೀ ರಾಜ್ಯದಲ್ಲಿ ಆಹಾರ ಗುಣಮಟ್ಟ ಪರಿಶೀಲನೆ ಮಾಡುತ್ತಿದ್ದೇವೆ. ಇದುವರೆಗೆ ಆಹಾರ ಸುರಕ್ಷತಾ ಇಲಾಖೆ ಇದೆಯೆಂದು ಜನರಿಗೆ ಗೊತ್ತಿರಲಿಲ್ಲ. ನಮ್ಮ ಸರ್ಕಾರ ಬಂದ ಮೇಲೆ ಅಧಿಕಾರಿಗಳಿಗೆ ಸ್ಪಷ್ಟ ಮಾರ್ಗಸೂಚಿ ನೀಡಿದ್ದೇವೆ ಎಂದರು.

ಆಗಸ್ಟ್​ನಲ್ಲಿ ಕೇಕ್, ಖೋವಾ ಐಟಂ ಎಲ್ಲಾ ಪರೀಕ್ಷೆ ಮಾಡಿದ್ದೇವೆ. ಅವುಗಳ ವರದಿ‌ ಇನ್ನಷ್ಟೇ ಬರಬೇಕಿದೆ. ಮುಂದಿನ ತಿಂಗಳು ಬೇರೆ ಸವ್ತುಗಳನ್ನು ಪರಿಶೀಲನೆಗೆ ತೆಗೆದುಕೊಳ್ಳಲಿದ್ದೇವೆ ಎಂದು ಅವರು ಮಾಹಿತಿ ನೀಡಿದರು.

WhatsApp Group Join Now
Telegram Group Join Now
Share This Article