ಸಚಿವ ಕೆ ಎನ್ ರಾಜಣ್ಣ ರಾಜೀನಾಮೆ!

Ravi Talawar
ಸಚಿವ ಕೆ ಎನ್ ರಾಜಣ್ಣ ರಾಜೀನಾಮೆ!
WhatsApp Group Join Now
Telegram Group Join Now

ಬೆಂಗಳೂರು, ಆಗಸ್ಟ್​ 11: ಸಹಕಾರ ಸಚಿವ ಕೆ ಎನ್ ರಾಜಣ್ಣ ರಾಜೀನಾಮೆ ನೀಡಿದ್ದಾರೆ. ಹೈಕಮಾಂಡ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಸಚಿವ ಕೆಎನ್​ ರಾಜಣ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ರಾಜೀನಾಮೆ ಬಗ್ಗೆ ಸಚಿವ ಕೆಎನ್​ ರಾಜಣ್ಣ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಬಳಿಕ ಸ್ಪಷ್ಟನೆ ನೀಡುತ್ತೇನೆ. ಯಾವ ವಿಚಾರಕ್ಕೆ ಹೈಕಮಾಂಡ್​ ನನ್ನ ಮೇಲೆ ಗರಂ ಆಗಿದೆ ಎಂಬುದು ಗೊತ್ತಿಲ್ಲ. ಹೈಕಮಾಂಡ್ ಹೇಳಿದ ಮೇಲೆ ಅಲ್ವಾ ಮಾತನಾಡುವುದು ಎಂದು ಹೇಳಿದರು.

WhatsApp Group Join Now
Telegram Group Join Now
Share This Article