ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿಂಡಲಗಾ ಗ್ರಾಮದ ಮುಖ್ಯ ರಸ್ತೆಯಿಂದ ತರುಣ ಭಾರತ ಪ್ರೆಸ್ ವರೆಗಿನ ರಸ್ತೆಯ ಡಾಂಬರೀಕರಣದ ಕಾಮಗಾರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಹಿತ್ತಲಮನಿ, ವಿಠ್ಠಲ ದೇಸಾಯಿ, ರಾಹುಲ್ ಉರನಕರ್, ಗಜಾನನ ಬಾಂಡೇಕರ್, ಅಶೋಕ ಕಾಂಬಳೆ, ಮಿಥುನ್ ಉಸುಳಕರ್, ವಿಜಯ ಪಾಟೀಲ, ಪ್ರೇರಣಾ ಮಿರಜಕರ್, ನಾಮದೇವ್ ಪಾಟೀಲ, ರಾಮಚಂದ್ರ ಕುದ್ರೆಮನಿಕರ್, ಗಿರಿಧರ್ ಬೆಳಗುಂದ್ಕರ್, ಹೇಮಾ, ತರುಣ ಭಾರತ ಸಿಬ್ಬಂದಿ ಉಪಸ್ಥಿತರಿದ್ದರು.