ಗ್ರಾಮೀಣ ಕ್ಷೇತ್ರದ ಸಾರ್ವಜನಿಕ ಸಮಸ್ಯೆ ಆಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ

Ravi Talawar
ಗ್ರಾಮೀಣ ಕ್ಷೇತ್ರದ ಸಾರ್ವಜನಿಕ ಸಮಸ್ಯೆ ಆಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ
WhatsApp Group Join Now
Telegram Group Join Now
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬುಧವಾರ ಬೆಳಗಾವಿಯ ಗೃಹ ಕಚೇರಿಯಲ್ಲಿ ಬೆಳಗಾವಿ ಜಿಲ್ಲೆಯ ಹಾಗೂ ಬೆಳಗಾವಿ ಗ್ರಾಮೀಣ ಕ್ಷೇತ್ರದ  ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದರು.
ಕ್ಷೇತ್ರದ ಜನತೆಯ ಸಮಸ್ಯೆಗಳನ್ನು ಆಲಿಸುವುದಕ್ಕೆ ಚುನಾವಣೆ ಸಂದರ್ಭದಿಂದಾಗಿ ಸಾಧ್ಯವಾಗಿರಲಿಲ್ಲ. ಸದ್ಯಕ್ಕೆ ಕ್ಷೇತ್ರದ, ಜಿಲ್ಲೆಯ ಜನರ ಸಮಸ್ಯೆಗಳನ್ನು ಆಲಿಸಿ ಅವರ ಸಂಕಟಗಳಿಗೆ ಸ್ಪಂದಿಸುತ್ತೇನೆ ಎಂದು ಸಚಿವೆ ಹೆಬ್ಬಾಳ್ಕರ್ ಹೇಳಿದರು.
ವೃದ್ಧರು, ವಿಕಲಚೇತನರು, ಯುವಕರು, ಮಹಿಳೆಯರು ಸಾಕಷ್ಟು ಸಂಖ್ಯೆಯಲ್ಲಿ ಹೆಬ್ಭಾಳ್ಕರ್ ಕಡೆಗೆ ಬಂದು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರು.  ವೃದ್ಧಾಪ್ಯವೇತನ, ವಿಧವಾವೇತನ, ಬ್ಯಾಂಕ್ ಸಮಸ್ಯೆ, ಬೆಳೆ ಪರಿಹಾರ, ಸೇರಿದಂತೆ ತೊಂದರೆ, ಕಾನೂನಾತ್ಮಕ ಸಮಸ್ಯೆಗಳನ್ನು ಹೇಳಿಕೊಂಡರು. ಜನರ ಅಹವಾಲುಗಳನ್ನು ಆಲಿಸಿದ ಸಚಿವೆ ಹೆಬ್ಬಾಳ್ಕರ್ ಶೀಘ್ರವೇ ಸಮಸ್ಯೆಗೆ ಪರಿಹಾರ ನೀಡುವುದಾಗಿ ಭರವಸೆ ನೀಡಿದರು.
WhatsApp Group Join Now
Telegram Group Join Now
Share This Article