ʼಮಹಾʼ ಸಚಿವ ಮುಂಡೆ ಮಂತ್ರಿ ಸ್ಥಾನಕ್ಕೆ ರಿಸೈನ್‌; ಆಪ್ತನ ಮೇಲಿನ ಕೇಸ್‌ಗೆ ಸಚಿವಗಿರಿ ಕೊಲ್ಯಾಪ್ಸ್‌

Ravi Talawar
ʼಮಹಾʼ ಸಚಿವ ಮುಂಡೆ ಮಂತ್ರಿ ಸ್ಥಾನಕ್ಕೆ ರಿಸೈನ್‌; ಆಪ್ತನ ಮೇಲಿನ ಕೇಸ್‌ಗೆ ಸಚಿವಗಿರಿ ಕೊಲ್ಯಾಪ್ಸ್‌
WhatsApp Group Join Now
Telegram Group Join Now

ಮಹಾರಾಷ್ಟ್ರ ಸರ್ಕಾರದ ಸಚಿವ ಮತ್ತು ಎನ್‌ಸಿಪಿ ನಾಯಕ ಧನಂಜಯ್ ಮುಂಡೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಈ ಮಾಹಿತಿ ನೀಡಿದ್ದಾರೆ.  ಮುಂಡೆ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ ಎಂದು ಸಿಎಂ ದೇವೇಂದ್ರ ಫಡ್ನವೀಸ್ ಅವರು ಅಜಿತ್ ಪವಾರ್ ಮತ್ತು ಪ್ರಫುಲ್ ಪಟೇಲ್ ಅವರಿಗೆ ಪತ್ರ ಬರೆದಿದ್ದರು ಎನ್ನಲಾಗಿದೆ.

ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಧನಂಜಯ್ ಮುಂಡೆ ಬೀಡ್ ಜಿಲ್ಲೆಯ ಪಾರ್ಲಿಯ ಎನ್‌ಸಿಪಿ ಶಾಸಕರಾಗಿದ್ದಾರೆ. ಇದಕ್ಕೂ ಮೊದಲು ಅವರು ಬೀಡ್‌ನ ಉಸ್ತುವಾರಿ ಸಚಿವರಾಗಿದ್ದರು. ಪ್ರಸ್ತುತ, ಎನ್‌ಸಿಪಿ ಮುಖ್ಯಸ್ಥ ಅಜಿತ್ ಪವಾರ್ ಪುಣೆ ಮತ್ತು ಬೀಡ್ ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದಾರೆ.

 

 

WhatsApp Group Join Now
Telegram Group Join Now
Share This Article