ಬೆಳಗಾವಿ: ನಿಪ್ಪಾಣಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಮತ್ತು ನನ್ನ ಆತ್ಮೀಯ ಸ್ನೇಹಿತ ಕಾಕಾಸಾಹೇಬ ಪಾಟೀಲ್ ಅವರ ನಿಧನದಿಂದ ನನಗೆ ತೀವ್ರ ಆಘಾತವಾಗಿದೆ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಸಂತಾಪ ಸೂಚಿಸಿದ್ದಾರೆ.
ಜನಸಾಮಾನ್ಯರ ಹಿತರಕ್ಷಣೆಗಾಗಿ ತಮ್ಮ ಜೀವನವನ್ನು ಸಮರ್ಪಿಸಿದ್ದ ಕಾಕಾಸಾಹೇಬ್ ಪಾಟೀಲ್ ಅವರು ಜನಪ್ರಿಯ ನಾಯಕರಾಗಿದ್ದರು. ಅವರ ಅಗಲಿಕೆ ನಮ್ಮ ಪಕ್ಷಕ್ಕೆ ಮತ್ತು ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಕುಟುಂಬ ಸದಸ್ಯರಿಗೆ ಮತ್ತು ಅಭಿಮಾನಿಗಳಿಗೆ ಈ ದುಃಖದ ಸಮಯದಲ್ಲಿ ಧೈರ್ಯ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಈ ದುಃಖದಲ್ಲಿ ನಾನೂ ನಿಮ್ಮೊಂದಿಗೆ ನಿಂತಿದ್ದೇನೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.