ರಾಣಿ ಚನ್ನಮ್ಮ ಮೃಗಾಲಯಕ್ಕೆ  ಭೇಟಿ ನೀಡಿ, ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವ ಸತೀಶ ಜಾರಕಿಹೊಳಿ

Ravi Talawar
ರಾಣಿ ಚನ್ನಮ್ಮ ಮೃಗಾಲಯಕ್ಕೆ  ಭೇಟಿ ನೀಡಿ, ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವ ಸತೀಶ ಜಾರಕಿಹೊಳಿ
WhatsApp Group Join Now
Telegram Group Join Now
ಬೆಳಗಾವಿ: ರಾಣಿ ಚನ್ನಮ್ಮ ಮೃಗಾಲಯಕ್ಕೆ  ಲೋಕೋಪಯೋಗಿ ಜಿಲ್ಲಾಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಭೇಟಿ ನೀಡಿ.   ಮೃಗಾಲಯದ ಪ್ರಾಣಿಗಳ ಪಾಲನೆ-ಪೋಷಣೆ ಬಗ್ಗೆ ಪರಿಶೀಲನೆ ನಡೆಸಿ, ಮುಂಜಾಗ್ರತಾ ಕ್ರಮ ಕೈಗೊಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೃಷ್ಣ ಮೃಗಗಳು ಕಾಯಿಲೆಯಿಂದ ಮೃತಪಟ್ಟ ಹಿನ್ನಲೆಯಲ್ಲಿ  ಮೃಗಾಯಲಕ್ಕೆ ಸಚಿವರು ಮಂಗಳವಾರ ಭೇಟಿ ನೀಡಿ, ಅಧಿಕಾರಿಗಳು ಹಾಗೂ ವೈದ್ಯರೊಂದಿಗೆ ಚರ್ಚಿಸಿದರು.  ಕೃಷ್ಣ ಮೃಗಾಯಲಕ್ಕೆ ಬಂದ ಈ  ಕಾಯಿಲೆ ಬೇರೆ ಬೇರೆ  ಪ್ರಾಣಿಗಳಿಗೆ ಸಂಕು ತಗಲುವ  ಸಾಧ್ಯತೆ ಇದ್ದರೆ  ಮುಂಜಾಗ್ರತವಾಗಿ ವೈದ್ಯಕೀಯ ಚಿಕಿತ್ಸೆ ನೀಡಬಹುದು ಎಂದು ಅಧಿಕಾರಿಗಳಿಂದ ಮಾಹಿತಿ ಪಡೆದರು, ಈ ಕಾಯಿಲೆ ಬೇರೆ   ಪ್ರಾಣಿಗಳ ಮೇಲೆ ಪರಿಣಾಮ ಬೀರುವ  ಯಾವುದೇ ಸಾಧ್ಯತೆ ಇಲ್ಲ ಎಂದು ಅಧಿಕಾರಿಗಳು ಸಚಿವರಿಗೆ ಸ್ಪಷ್ಟನೆ ನೀಡಿದರು.
ಬೆಂಗಳೂರಿನಿಂದ ನುರಿತ ವೈದ್ಯ ತಜ್ಞರ ತಂಡ ಮೃಗಾಯದಲ್ಲಿ ಕೃಷ್ಣಮೃಗಗಳ ಚಿಕಿತ್ಸೆ ನೀಡಿದೆ. ಈ ಕಾಯಿಲೆ ಬಗ್ಗೆ ಲಾಬ್‌ ನಿಂದ ವರದಿ ಕೂಡ ಪಡೆಯಲಾಗಿದೆ.  ಸಧ್ಯ ಇರುವ ಹುಲಿ, ಸಿಂಹಗಳ ಸೇರಿದಂತೆ ಇನ್ನೂಳಿದ ಪ್ರಾಣಿಗಳ ಮೇಲೆ ಕಟ್ಟುನಿಟ್ಟಿನ ನಿಗಾವಹಿಸಿ ಪ್ರಾಣಿಗಳ ಆರೋಗ್ಯ ಕಾಪಾಡಲು ಎಲ್ಲಾ ಕ್ರಮಗಳನ್ನು ಕೈಕೊಳ್ಳಲಾಗಿದೆ ಎಂದು ಅಧಿಕಾರಿಗಳು ಸಚಿವರಿಗೆ ವಿವರಿಸಿದರು.
ಈ ಕಾಯಿಲೆ ಹೆಚ್ಚಾಗದಂತೆ ನಿಯಂತ್ರಿಸಲು ವೈದ್ಯ ತಂಡದಿಂದ  ಚಿಕಿತ್ಸೆ ನೀಡಲಾಗುತ್ತಿದ್ದು, ಕಾಯಿಲೆ   ಹತ್ತೋಟಿಗೆ ತರಲು ಎಲ್ಲಾ ರೀತಿಯ ಚಿಕಿತ್ಸೆ ನೀಡಲಾಗಿದೆ. ಕಾಯಿಲೆ  ಹತ್ತೋಟಿಗೆ ಕೂಡ ಬಂದಿದೆ ಎಂದು ತಿಳಿಸಿದರು.
ಈ ವೇಳೆ  ಬೆಳಗಾವಿ  ಎಸಿಎಪ್‌ ನಾಗರಾಜ ಬಾಳೇಹೂಸೂರ,  ಕರ್ನಾಟಕ ಮೃಗಾಯದ ಪ್ರಾಧಿಕಾರಿದ ಸದಸ್ಯ ಕಾರ್ಯದರ್ಶಿ   ಸುನೀಲ ಪನವಾರ್‌,  ಮಂಜುನಾಥ ಚವ್ಹಾನ್‌ , ಡಿಎಪ್‌ಓ ಕ್ರಾಂತಿ ಎನ್‌. ಇ, ವೈದ್ಯರಾದ ಪ್ರಯಾಗ್‌  ಹಾಗೂ ಮೃಗಾಲಯದ ಸಿಬ್ಬಂದಿ ಇತರರು ಇದ್ದರು.
WhatsApp Group Join Now
Telegram Group Join Now
Share This Article