ಮೂಡಲಗಿ: ಸಕಲ ಜೀವರಾಶಿಗಳನ್ನು ಪ್ರೀತಿಸುತ್ತ ದಯೆ,ಕರುಣೆ ಹೊಂದಿ ಯಾರ ಕೇಡನ್ನು ಬಯಸದೆ ಇರುವುದು ನಿಜವಾದ ಮನು? ಧರ್ಮವಾಗಿದೆ ಎಂದು ಧರ್ಮ ಗುರುಗಳಾದ ಮೌಲಾನಾ ಮೊಹಮ್ಮದ್ ಶಫೀಕ್ ಆಜ್ಮಿ ಹೇಳಿದರು.
ಪಟ್ಟಣದ ಈದ್ಗಾ ಮೈದಾನದಲ್ಲಿ ಬಿಟಿಟಿ ಕಮಿಟಿ ನೇತೃತ್ವದಲ್ಲಿ ಹಾಗೂ ವಿವಿಧ ಕಮಿಟಿಗಳ ಸಹಕಾರದಲ್ಲಿ ಪವಿತ್ರ ರಂಜಾನ್ ಹಬ್ಬದ ಈದುಲ್ ಫಿತರನ ಸಾಮೂಹಿಕ ಪ್ರಾರ್ಥನೆಗೆ ಸೇರಿದ ಸರ್ವ ಬಾಂಧವರನ್ನು ಉದ್ದೇಶಿಸಿ ಮಾತನಾಡಿದ ಅವರು, ಪರೋಪಕಾರ, ಸಮಾನತೆ ಮತ್ತು ಸೌಹಾರ್ದತೆಯ ಧರ್ಮದ ನಿಜತೆಯನ್ನು ಅರಿತು ದ್ವೇ?, ಅಸೂಯೆ ಬಿಟ್ಟು ಪರಸ್ಪರರು ಅನ್ಯೋನ್ಯತೆ ಹೊಂದಿ ಅಲ್ಲಾಹನ ಪ್ರೀತಿಗೆ ಪಾತ್ರರಾಗಬೇಕು ಎಂದು ಹಿತ ವಚನ ಹೇಳಿದರು.
ಸಾಮೂಹಿಕ ಪ್ರಾರ್ಥನೆ ಬಳಿಕ ಪರಸ್ಪರರು ಸಡಗರ ಸಂಭ್ರಮದಿಂದ ರಂಜಾನ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ಈ ವೇಳೆ ಅರಭಾವಿ ಜನಪ್ರೀಯ ಶಾಸಕ ಬಾಲಚಂದ್ರ ಜಾರಕಿಹೊಳಿ, ಸಚಿವ ಸತೀಶ ಜಾರಕಿಹೊಳಿ ಹಾಗೂ ಬೆಳಗಾವಿ ಶಾಸಕ ರಾಜು ಶೇಠ ಅವರು ಸಮಸ್ತ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಾಶಯಗಳನ್ನು ಕೋರಿ ಶುಭ ಹಾರೈಸಿ ಕಳುಹಿಸಿದ ಸಂದೇಶ ಪತ್ರವನ್ನು ಪುರಸಭೆ ಮಾಜಿ ಅಧ್ಯಕ್ಷ ಅಜೀಜ್ ಡಾಂಗೆ ಅವರು ಓದಿ ಹೇಳಿದರು. ಮುಖಂಡರಾದ ಲಾಲಸಾಬ ಸಿದ್ದಾಪೂರ ಅವರು ರಂಜಾನ ಹಬ್ಬದ ಪ್ರಾರ್ಥನೆಗಾಗಿ ಸಹಕರಿಸಿದ ಸಿಪಿಐ , ಪಿಎ??? , ಪುರಸಭೆ ಮುಖ್ಯಾಧಿಕಾರಿ ಮತ್ತು ಸಿಬ್ಬಂದಿ ಹಾಗೂ ಪೋಲೀಸ್ ಸಿಬ್ಬಂದಿ ವರ್ಗದವರಿಗೆ ಧನ್ಯವಾದಗಳನ್ನು ಹೇಳಿದರು.
ಈ ಸಂದರ್ಭದಲ್ಲಿ ಬಿಟಿಟಿ ಕಮಿಟಿಯ ಅಧ್ಯಕ್ಷ ಅನ್ವರ್ ನದಾಫ್, ಉಪಾಧ್ಯಕ್ಷ ಹುಸೇನ್ ಥರಥರಿ ಕಾರ್ಯದರ್ಶಿ ಬುಡನಸಾಬ ಡಾಂಗೆ, ಖಜಾಂಚಿ ಅಬ್ದುಲಗಫಾರ ಡಾಂಗೆ, ರಾಜು ಅತ್ತಾರ, ಮುಸ್ತಫಾ ತಾಂಬೋಳಿ, ಆದಮಸಾಬ ತಾಂಬೋಳಿ, ಶರೀಫ್ ಪಟೇಲ್ ಸುಲ್ತಾನಸಾಬ ಕಳ್ಳಿಮನಿ, ಹಸನ ಥರಥರಿ, ಅಬ್ದುಲಸಾಬ ಇನಾಮದಾರ, ರೆಹಮಾನ್ ಝಾರೆ, ಇರ್ಶಾದ್ ಇನಾಮದಾರ,ದಾದು ಮುಗುಟಖಾನ, ಮಲೀಕ ಹುಣಶ್ಯಾಳ, ಹುಸೇನಸಾಬ ಶೇಖ, ನನ್ನುಸಾಬ ಶೇಖ, ಮಲೀಕ ಪಾಶ್ಚಾಪೂರ, ಲಾಲಸಾಬ ಸೈಯದ್, ಸಾಕೀಬ್ ಪೀರಜಾದೆ, ಸಾಹೇಬ್ ಪೀರಜಾದೆ, ಕುತುಬುದ್ದೀನ ನೇಸರ್ಗಿ, ಸೇರಿದಂತೆ ಸಮಾಜದ ಅನೇಕ ಗಣ್ಯರು ಉಪಸ್ಥಿತರಿದ್ದರು.


