Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಥಣಿ, ಶ್ರೀ ಸುಧಾ ಭಜನಾ ಮಂಡಳದಿಂದ ಏಕಾದಶಿ‌ ನಿಮಿತ್ಯ ಪಲ್ಲಕ್ಕಿ ಉತ್ಸವ. 

ಅಥಣಿ.ಆಶಾಢ ಏಕಾದಶಿ ನಿಮಿತ್ಯ ಶ್ರೀ ಸುಧಾ ಮಹಿಳಾ ಭಜನಾ ಮಂಡಳದ ಭಗಿನಿಯರು ಕೋಲಾಟ, ನೃತ್ಯದೊಂದಿಗೆ ಗ್ರಾಮ ಪ್ರದಕ್ಷಿಣೆ ಹಾಕುವ ಮೂಲಕ ಶ್ರೀ ವಿಠ್ಠಲ ಮಂದಿರಕ್ಕೆ ಆಗಮಿಸಿದರು.
        ಶ್ರೀ ಸುಧಾ ಭಜನಾ ಮಂಡಳದ ಭಗಿನಿಯರು ಸ್ಥಳೀಯ ಶ್ರೀ ನರಸಿಂಹ ದೇವಸ್ಥಾನದಲ್ಲಿ ಪಲ್ಲಕ್ಕಿಗೆ, ನರಸಿಂಹ ದೇವರಿಗೆ ಆರತಿ ಮಾಡಿದ ನಂತರ  ಮೆರವಣಿಗೆ ಮೂಲಕ ಹೊರಟು ಬಾರೆ ಭಾಗ್ಯದ ನಿಧಿಯೇ, ಇಟ್ಟಿಗೆ ಮೇಲೆ ನಿಂತಾನಮ್ಮ ,  ಗುರು ಮಧ್ವರಾಯರಿಗೆ, ರಂಗಾ ನಿನ್ನ ಕೊಂಡಾಡುವೆ, ಶ್ರೀಪತಿಯು ನಮಗೆ ಸಂಪದವೀಯಲಿ  ಸೇರಿದಂತೆ ಅನೇಕ  ದಾಸರ  ಪದಗಳನ್ನು ಹಾಡುತ್ತ, ಕುಣಿಯುತ್ತ, ವಿಠ್ಠಲನ ನಾಮಸ್ಮರಣೆ ಮಾಡುತ್ತ ಕೋಲಾಟ ಆಡಿದರು, ತುಳಸಿ ಕಟ್ಟೆ ತಲೆ ಮೇಲೆ ಹೊತ್ತು ಮಹಿಳೆಯರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಈ ಮೆರವಣಿಗೆ ಜೋಶಿ ಗಲ್ಲಿ, ಹಬ್ಬು ಗಲ್ಲಿ, ದೇಶಪಾಂಡೆ ಗಲ್ಲಿಯ ಮೂಲಕ ಶ್ರೀ ವಿಠ್ಠಲ ಮಂದಿರ ತಲುಪಿ ಸಮಾವೇಶ ಗೊಂಡಿತು.  ಮೆರವಣಿಗೆ ಬರುವ ದಾರಿಯುದ್ದಕ್ಕೂ ಜನರು ಆರತಿ ಮಾಡಿ ಬರಮಾಡಿಕೊಂಡರು.  ಹರಿವಾಣ ಸೇವೆಯನ್ನು ದೇವರಿಗೆ ಅರ್ಪಿಸಲಾಯಿತು, ವಿಠ್ಠಲ ದೇವರಿಗೆ ಆರತಿ ಮಾಡಲಾಯಿತು.   ಏಕಾದಶಿ ವೃತದ ಜಾಗೃತಿ ಮೂಡಿಸುವ ಉದ್ದೇಶದಿಂದ ವಿಶಿಷ್ಠವಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು ಎಂದು ಶ್ರೀ ಸುಧಾ ಭಜನಾ ಮಂಡಳದ ರಮಾ ಕುಲಕರ್ಣಿ ಹೇಳಿದರು.
        ಮೆರವಣಿಗೆಯಲ್ಲಿ ಶ್ರೀ ಸುಧಾ ಭಜನಾ ಮಂಡಳಿಯ ಸದಸ್ಯೆಯರು ಉತ್ಸಾಹದಿಂದ ಪಾಲ್ಗೊಂಡಿದ್ದರು.
Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿದ್ಯಾರ್ಥಿಗಳ ಮೇಲಿನ ಹಲ್ಲೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆಶ್ರೀಮತಿ. ಸರಳಾ ಶಿವಾನಂದ ಹೇರೆಕರ ಇವರು    ಬೆಳಗಾವಿ ಶ್ರೀ ಬಸವೇಶ್ವರ ಕೋ-ಆಪರೇಟಿವ್  ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಆಯ್ಕೆವಿಜ್ರಂಭಣಿಯಿಂದ ಜರುಗಿದ ಶ್ರೀ ಹಡಪದ ಅಪ್ಪಣ್ಣನವರ ಜಯಂತಿಅಥಣಿ, ಶ್ರೀ ಸುಧಾ ಭಜನಾ ಮಂಡಳದಿಂದ ಏಕಾದಶಿ‌ ನಿಮಿತ್ಯ ಪಲ್ಲಕ್ಕಿ ಉತ್ಸವ. ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಆವರಣದಲ್ಲಿ ಕಾರ ಹುಣ್ಣಿಮೆಗೆ ಮೊದಲೇ ಸಜ್ಜುಗೊಂಡ ವೇದಿಕೆಯ ಪೂಜಾ ಕಾರ್ಯಕ್ರಮಶ್ರೀ ಖಾಸ್ಗತೇಶ್ವರ ಜಾತ್ರೋತ್ಸವ * ಎಲ್ಲಡೆ ಸಂಭ್ರಮ, ಸಡಗರದ ಮೆರಗುಜ್ಯೋತಿ ಬೆಳಗಿಸುವ ಮೂಲಕ ಸಾಂಸ್ಕೃತಿಕ ಕ್ರೀಡೆ, ಇ ಎಲ್ ಸಿ. ರೇಂಜರ್, ರೋವರ್ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭ ವಿಕಸಿತ್ ವೈಬ್ರಂಟ್‌ ವಿಲೇಜ್‌-2006 ವಿಶಿಷ್ಟ ಕಾರ್ಯಕ್ರಮಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಸಂಸತ ಚುನಾವಣೆ ಸ್ವಾಸ್ಥ್ಯ ಸಂಕಲ್ಪ ಯೋಜನೆ ಕಾರ್ಯಕ್ರಮ