LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಅಮಿತ್‌ ಶಾರನ್ನು ಭೇಟಿಯಾದ ರಿಷಬ್‌ ಶೆಟ್ಟಿ

Kantara Movie Actor Rishab Shetty News: ಕಾಂತಾರ ಸಿನಿಮಾವನ್ನು ನಿರ್ದೇಶಿಸಿ, ನಟಿಸಿ ರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ ನಟ ರಿಷಬ್‌ ಶೆಟ್ಟಿ ಈಗ ಮುಂದಿನ ಸಿನಿಮಾದ ಘೋಷಣೆ ಮಾಡಬೇಕಿದೆ. ಈ ಮಧ್ಯೆ ಅವರು ಅಮಿತ್‌ ಶಾ ಅವರನ್ನು ಭೇಟಿ ಮಾಡಿದ್ದಾರೆ. ಇದರ ಹಿಂದಿನ ಕಾರಣ ಏನು?  

ದೆಹಲಿಯಲ್ಲಿ ಕಾಣಿಸಿಕೊಂಡ್ರು

ಇತ್ತೀಚೆಗೆ ಅವರು ದೆಹಲಿಗೆ ಹೋದ ವಿಡಿಯೋ ಕ್ಯಾಮರಾದಲ್ಲಿ ಸೆರೆ ಆಗಿತ್ತು. ದೆಹಲಿಯ ಏರ್‌ಪೋರ್ಟ್‌ನಲ್ಲಿ ಅವರು ಕಾಣಿಸಿಕೊಂಡಿದ್ದರು. ಈ ವಿಡಿಯೋ ರಿಲೀಸ್‌ ಆಗಿತ್ತು. ಇದರ ಹಿಂದಿನ ಕಾರಣ ಏನು ಎಂದು ಈಗ ರಿವೀಲ್‌ ಆಗಿದೆ.

ಕಾಂತಾರವನ್ನು ಹೊಗಳಿದ ಅಮಿತ್‌ ಶಾ

ಗೌರವಾನ್ವಿತ ಕೇಂದ್ರ ಗೃಹ ಸಚಿವ ಶ್ರೀ ಅಮಿತ್ ಶಾ ಅವರನ್ನು ಭೇಟಿಯಾಗುವ ಸೌಭಾಗ್ಯ ನನ್ನದಾಯಿತು. 'ಕಾಂತಾರ' ಮತ್ತು 'ಕಾಂತಾರ ಚಾಪ್ಟರ್ 1' ಚಿತ್ರಗಳ ಬಗ್ಗೆ ಅವರು ಮೆಚ್ಚುಗೆಯ ಮಾತುಗಳನ್ನಾಡಿದ್ದು, ನನ್ನ ಜೀವನದ ಅತ್ಯಂತ ಸ್ಮರಣೀಯ ಕ್ಷಣಗಳಲ್ಲಿ ಒಂದಾಗಿದೆ ಎಂದಿದ್ದಾರೆ.

ಮುಂದಿನ ಸಿನಿಮಾ ಯಾವುದು?

ನನ್ನ ಮುಂಬರುವ ಸಿನಿಮಾಗಳ ಕುರಿತೂ ಅವರೊಂದಿಗೆ ಚರ್ಚಿಸುವ ಅದ್ಭುತ ಅವಕಾಶ ಸಿಕ್ಕಿತು ಎಂದು ರಿಷಬ್‌ ಶೆಟ್ಟಿ ಹೇಳಿದ್ದಾರೆ.

ಏನೇನು ಮಾತನಾಡಿದರು?

ವಿಶೇಷವಾಗಿ ನಮ್ಮ ಇತಿಹಾಸ, ಸಂಸ್ಕೃತಿ, ಕಲೆ ಮತ್ತು ಸಿನಿಮಾ ನಿರ್ಮಾಣದ ಬಗ್ಗೆ ಅವರಿಗಿರುವ ಆಳವಾದ ಜ್ಞಾನ, ತಿಳುವಳಿಕೆಯನ್ನು ನೋಡಿ ನಾನು ನಿಜವಾಗಿಯೂ ಖುಷಿ ಆಯ್ತು ಎಂದು ರಿಷಬ್‌ ಶೆಟ್ಟಿ ಹೇಳಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪರಸ್ಪರ ಸಹಾಯ ಸಹಕಾರದಿಂದ ದೇವಸ್ಥಾನಗಳ ಅಭಿವೃದ್ಧಿ :ಬಾಬಾಸಾಹೇಬ ಪಾಟೀಲ ಶ್ರೀ ವೇಮನ್ ಕೋ-ಆಪ್. ಕ್ರೆಡಿಟ್ ಸೊಸಾಯಿಟಿಗೆ 3.06 ಕೋಟಿ ರೂ. ಲಾಭ : ಸಂತೋಷ ಸೋನವಾಲ್ಕರ ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರ ಮತ್ತು ಅಭಿಯಂತರರ ಪಾತ್ರ ಮಹತ್ವಪೂರ್ಣವಾದುದು :  ಡಾ.ಅಲ್ಲಮಪ್ರಭು ಮಹಾಸ್ವಾಮಿಗಳುಅಲ್ಪಸಂಖ್ಯಾತರ ಕಲ್ಯಾಣ ಯೋಜನೆಗಳು ಕಾಲಮಿತಿಯೊಳಗೆ ಜನರಿಗೆ ತಲುಪಿಸಿ: ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ: ಶಿಕ್ಷಣ ಇಲಾಖೆಯಿಂದ ಅಭಿನಂದನಾ ಪತ್ರಅಭಿಯಂತರರು ಸಮಾಜದ ಅಭಿವೃದ್ಧಿಗೆ ಹೊಸ ದಿಕ್ಕು ನೀಡಲಿ : ಶಾಸಕರಾದ ವಿನಯ ಕುಲಕರ್ಣಿಪ್ರಜಾಪ್ರಭುತ್ವ ಉಳಿಸಲು ಯುವಜನತೆ ನಾಯಕತ್ವ ಗುಣ ಬೆಳೆಸಿಕೊಳ್ಳಿ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜ ಕರೆ            ’ವಕ್ರತುಂಡ’ ಚಿತ್ರದ ಧಮಾಕಾ : ’ಜೈ ಗಣೇಶ’ ಟೈಟಲ್ ಟ್ರ್ಯಾಕ್ ಸಾಂಗ್ ಭರ್ಜರಿ ಸದ್ದು  ಮಹಿಳೆ ಕಾಣೆ: ಪತ್ತೆಗೆ ಮನವಿಕಲ್ಯಾಣ ಕರ್ನಾಟಕ ಉತ್ಸವ: ಬಳ್ಳಾರಿಯಲ್ಲಿ ಸಚಿವ ಟಿ. ರಘುಮೂರ್ತಿ ಅವರಿಂದ ಧ್ವಜಾರೋಹಣ