Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

 ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆ: 29,568 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

ಧಾರವಾಡ : ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷಾಯು ಮಾರ್ಚ 18, 2026 ರಿಂದ ಏಪ್ರೀಲ್ 02, 2026 ರವರೆಗೆ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1:15 ಗಂಟೆವರೆಗೆ ಪರೀಕ್ಷೆಗಳು ಜರುಗಲಿವೆ.

ಜಿಲ್ಲೆಯಲ್ಲಿ ಒಟ್ಟು 105 ಪರೀಕ್ಷಾ ಕೇಂದ್ರಗಳಿದ್ದು, ಒಟ್ಟು 29,568 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಾರೆ. 26,171 ವಿದ್ಯಾರ್ಥಿಗಳು ಹೊಸದಾಗಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. 960 ಬಾಹ್ಯ ಅಭ್ಯರ್ಥಿಯಾಗಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. 2295 ವಿದ್ಯಾರ್ಥಿಗಳು ಪುನರಾವರ್ತಿತವಾಗಿ, 142 ಪುನರಾವರ್ತಿತ ಬಾಹ್ಯ ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.

ಎಲ್ಲ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲು ಕಲಂ 144 ರನ್ವಯ ನಿμÉೀದಾಜ್ಞೆ ಪ್ರದೇಶವೆಂದು ಘೋಷಿಸಲಾಗಿದೆ. ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರದ ಸುತ್ತಮುತ್ತಲು 200 ಮೀಟರ್ ಅಂತರದಲ್ಲಿರುವ ಝರಾಕ್ಸ್ ಅಂಗಡಿಗಳನ್ನು ಮುಚ್ಚಿಸಲು ಆದೇಶ ಹೊರಡಿಸಲಾಗಿದೆ. ಜಿಲ್ಲಾ ಹಂತದಲ್ಲಿ ಜಾಗೃತದಳದ ಅಧಿಕಾರಿಗಳೆಂದು ಉಪನಿರ್ದೇಶಕರು (ಆಡಳಿತ) ಹಾಗೂ ಉಪನಿರ್ದೇಶಕರು (ಅಭಿವೃದ್ಧಿ) ರವರನ್ನು ನೇಮಕ ಮಾಡಲಾಗಿದೆ.

ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಆಯುಕ್ತರಿಗೆ, ಜಿಲ್ಲಾ ಪೆÇಲೀಸ್ ವರಿಷ್ಠಾಧಿüಕಾರಿಗಳಿಗೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲು ಪೆÇೀಲಿಸ್ ಬಂದೋಬಸ್ತಗಳನ್ನು ನಿರ್ವಹಿಸಲು ಸೂಕ್ತ ನಿರ್ದೇಶನ ನೀಡಲಾಗಿದೆ.
ಪರೀಕ್ಷಾ ದಿನಗಳಂದು ಹೆಸ್ಕಾಂ ಅಧಿಕಾರಿಗಳಿಗೆ ತಡೆರಹಿತ ವಿದ್ಯುತ್ ಪೂರೈಸಲು ಸೂಚಿಸಲಾಗಿದೆ. ಕರ್ನಾಟಕ ಸಾರಿಗೆ ಸಂಸ್ಥೆಯಿಂದ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಕಲ್ಪಿಸಲಾಗಿದೆ.

ಎಸ್.ಎಸ್.ಎಲ್.ಸಿ-2026 ರ ಪರೀಕ್ಷೆಗೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ ಧಾರವಾಡ ಇವರ ಹಂತದಲ್ಲಿ ಜಿಲ್ಲಾ ಪಂಚಾಯತ ಸಭಾಭವನದಲ್ಲಿ ವೆಬ್‍ಕಾಸ್ಟಿಂಗ್ ನಡೆಸಲಾಗುವುದು.
ಜಿಲ್ಲೆಯ ಎಲ್ಲ ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರನ್ನು, ಪ್ರಶ್ನೆಪತ್ರಿಕೆಪಾಲಕರನ್ನು, ಪರೀಕ್ಷಾ ಕೇಂದ್ರಕ್ಕೆ ಸ್ಥಳೀಯ ನಿರೀಕ್ಷರನ್ನು ಮಂಡಳಿಯ ಆದೇಶದಂತೆ ನೇಮಕಮಾಡಲಾಗಿದೆ. ಪರೀಕ್ಷೆಯನ್ನು ಶಾಂತ, ಸುವ್ಯವಸ್ಥಿತ ಹಾಗೂ ಪಾರದರ್ಶಕತೆಯಿಂದ ನಡೆಸಲು ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ