LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bellary

ಎಸ್ ಡಿ ಎಂ ಸಿ  ಅಧ್ಯಕ್ಷರಾಗಿ ರಮೇಶ್ ಬಾರಿಕೆರ್ ಆಯ್ಕೆ 

ಬಳ್ಳಾರಿ (ಕಂಪ್ಲಿ) ಸೆ. 03: ಜಿಲ್ಲೆಯ ಕಂಪ್ಲಿ  ತಾಲೂಕಿನ ಎಮ್ಮಿಗನೂರು ಗ್ರಾಮದ ಕೆಪಿಎಸ್ ಶಾಲೆಯ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗೆ ಬಿ,ರಮೇಶ್ ಅವರನ್ನು ನೂತನ ಅಧ್ಯಕ್ಷರಾಗಿ ಮತ್ತು ಮರಿಸ್ವಾಮಿಯನ್ನು ಉಪಾಧ್ಯಕ್ಷರಾಗಿ ಆಯ್ಕೆ  ಮಾಡಲಾಗಿದೆ ಎಂದು ಶಾಲೆಯ ಮುಖ್ಯ ಗುರುಗಳು ತಿಳಿಸಿದ್ದಾರೆ.
ಶಾಸಕ ಜೆ.ಎನ್. ಗಣೇಶ್ ಅವರ ಆದೇಶದ ಮೇರೆಗೆ ಈ ಹಿಂದೆ ನೇಮಕವಾಗಿದ್ದ ಶ್ರೀ ಹೊಸಳ್ಳಿ ಜಡೇಶ ರವರ ಸ್ಥಾನಕ್ಕೆ ಬಿ,ರಮೇಶ್  ಅವರನ್ನು ಹಾಗೂ ಉಪಾಧ್ಯಕ್ಷರಾಗಿ ಮರಿಸ್ವಾಮಿಯನ್ನು ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.
ಈ ಹಿನ್ನೆಲೆಯಲ್ಲಿ ಬುಧವಾರ ಶಾಲೆ ಸಭಾಂಗಣದಲ್ಲಿ ಹೊಸಳ್ಳಿ ಜಡೆಶರವರಿಗೆ ಬೀಳ್ಕೊಡುಗೆ ಸಮಾರಂಭ ನೆಡೆಯಿತು ನಂತರ ಶಾಲೆಯ ಎಸ್‌ಡಿಎಂಸಿ ಸದಸ್ಯರ ನೇತೃತ್ವದಲ್ಲಿ, ಶಾಲೆಯ ಮುಖ್ಯಗುರುಗಳು ಹಾಗೂ ಗ್ರಾಮದ ಹಿರಿಯರ ಸಮ್ಮುಖದಲ್ಲಿ ರಮೇಶ್ ಬಾರಿಕೆರ್ ಅವರು ಕೆಪಿಎಸ್ ಶಾಲೆಯ ನೂತನ ಅಧ್ಯಕ್ಷರಾಗಿ ಪದಗ್ರಹಣ ಮಾಡಿದರು.
ಈ ಸಂದರ್ಭದಲ್ಲಿ ಮುಖ್ಯಗುರುಗಳಾದ ಹುಲುಗಪ್ಪ. ಹಾಗೂ ಪ್ರಭಾರಿ ಪ್ರಾಂಶುಪಾಲರಾದ ವೀರೇಶ,   ಶಾಲೆಯ ಎಸ್‌ಡಿಎಂಸಿ ಸದಸ್ಯರು, ಶಿಕ್ಷಕರು ಹಾಗೂ ಗ್ರಾಮದ ಮುಖಂಡರಾದ ಎಲ್ಲರ್ತಿ ರಾಘವೇಂದ್ರ ರೆಡ್ಡಿ. ಟಿ, ಪಿ ಜಡೇಪ್ಪ, ಶರಣ ಬಸವ ಗೌಡ, ಜಡೇಸಿದ್ದ ಸ್ವಾಮಿ ಸೇರಿದಂತೆ ಗ್ರಾಮದ ಶಿಕ್ಷಣ ಪ್ರೇಮಿಗಳು ನೂತನ ಅಧ್ಯಕ್ಷರಿಗೆ ಶುಭ ಹಾರೈಸಿದರು.
ಶಾಲೆಯ ಶೈಕ್ಷಣಿಕ ಅಭಿವೃದ್ಧಿ, ಮೂಲಸೌಕರ್ಯಗಳ ಸುಧಾರಣೆ ಹಾಗೂ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ಸಮಿತಿಯೊಂದಿಗೆ ಕೈಜೋಡಿಸಿ ಕಾರ್ಯನಿರ್ವಹಿಸುವುದಾಗಿ ನೂತನ ಅಧ್ಯಕ್ಷರು ತಿಳಿಸಿದರು.
ರಮೇಶ್ ಬಾರಿಕೆರ್ ಅವರ ಆಯ್ಕೆಗೆ  ಎಮ್ಮಿಗನೂರು ಗ್ರಾಮದ ಮುಖಂಡರು, ಪೋಷಕರು ಹಾಗೂ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್