Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

 ಕನ್ನಡ ಉಳುವಿಗಾಗಿ ಯುವಕರಲ್ಲಿ ಉತ್ಸಹ ಬರಬೇಕು :ಚಂದ್ರಶೇಖರ ಶ್ರೀ


ಹುಕ್ಕೇರಿ.ಕನ್ನಡ ಉಳುವಿಗಾಗಿ ಯುವಕರಲ್ಲಿ ಉತ್ಸಾಹ ಬರಬೇಕು ಎಂದು ಹುಕ್ಕೇರಿ ಹಿರೇಮಠದ ಚಂದ್ರಶೇಖರ ಮಹಾಸ್ವಾಮಿಗಳು ಹೇಳಿದರು.

ಹುಕ್ಕೇರಿ ನಗರದಲ್ಲಿ ಕರ್ನಾಟಕ ರಾಜ್ಯೋತ್ಸವ ಉತ್ಸಾಹಿ ಸಮಿತಿ ವತಿಯಿಂದ ಹಮ್ಮಿಕೊಂಡ ಕನ್ನಡ ರಾಜ್ಯೋತ್ಸವ ಸಾಂಸ್ಕೃತಿಕ ರೂಪಕಗಳ ಮೇರವಣೆಗೆಯನ್ನು ಕ್ಯಾರಗುಡ್ಡದ ಮಂಜುನಾಥ ಮಹಾರಾಜರು,ವಿರಕ್ತಮಠದ ಶಿವ ಬಸವ ಮಹಾಸ್ವಾಮಿಗಳು ಹಾಗೂ ಹುಣಿಶ್ಯಾಳ ನಿಜಗುನಾಂದ ಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಉದ್ಯಮಿ ಪೃಥ್ವಿ ಕತ್ತಿ  ಭುವನೇಶ್ವರಿ ಪುತ್ಥಳಿಗೆ ಪೂಜೆ ಸಲ್ಲಿಸಿ ಸಾಂಪ್ರದಾಯಕ ವಾದ್ಯಗಳನ್ನು ನುಡಿಸುವ ಮೂಲಕ ಚಾಲನೆ ನೀಡಿದರು.

ಮಾದ್ಯಮಗಳೊಂದಿಗೆ ಮಾತನಾಡಿದ ವಿದ್ಯುತ್ ಸಹಕಾರಿ ಸಂಘದ ಅದ್ಯಕ್ಷ ಮಹಾವೀರ ನಿಲಜಗಿ ಮಾತನಾಡಿ ಮಾಜಿ ಸಂಸದ ರಮೇಶ ಕತ್ತಿ ಮತ್ತು ಶಾಸಕ ನಿಖಿಲ್ ಕತ್ತಿ ಯವರ ಮಾರ್ಗದರ್ಶನದಲ್ಲಿ ತಾಲೂಕಿನ ಗಣ್ಯರು,ಯುವಕರು ರಾಜ್ಯೋತ್ಸವ ಉತ್ಸಾಹಿ ಸಮಿತಿ ವತಿಯಿಂದ ಸತತ ಐದು ವರ್ಷಗಳಿಂದ ಆಚರಿಸುತ್ತಿರುವ ಕಾರ್ಯಕ್ರಮ ದಿನ ಪೂರ್ತಿ ಸಾಂಸ್ಕೃತಿಕ ಮತ್ತು ಬೃಹತ್ ವಾದ್ಯ ಗಳೊಂದಿಗೆ ಆಚರಿಸಲಾಗುತ್ತಿದೆ ಕಾರಣ ಕನ್ನಡ ಪ್ರೇಮಿಗಳು ಕಾರ್ಯಕ್ರಮವನ್ನು ಯಶಸ್ವಿಗೋಳಿಸ ಬೇಕು ಎಂದರು.

ನಂತರ ವಿವಿಧ ಕಲಾ ತಂಡಗಳು ವೇಷ ಭೂಷನೆಗಳೊಂದಿಗೆ ಪಾರಂಪರಿಕ ರೂಪಕಗಳು ಮೇರವಣೆಗೆ ಮೂಲಕ ಕೋರ್ಟ ಸರ್ಕಲ್ ತಲುಪಿದವು.

ಕಸಾಪ ಅದ್ಯಕ್ಷ ಪ್ರಕಾಶ ಅವಲಕ್ಕಿ ಮಾತನಾಡಿ ಈ ಬಾರಿ ಹುಕ್ಕೇರಿ ನಗರದಲ್ಲಿ ಸಾಂಪ್ರದಾಯಿಕ ವಾದ್ಯಗಳ ರೂಪಕಗಳ ಮುಖಾಂತರ ರಾಜ್ಯೋತ್ಸವ ಆಚರಿಸುವದು ನಮಗೆ ಖುಷಿ ತಂದಿದೆ ಎಂದರು.

ಯುವ ಧುರುಣ ಸುಹಾಸ ನೂಲಿ ಉತ್ಸಾಹಿ ಸಮಿತಿ ಸದಸ್ಯರಿಗೆ ಶ್ರೀಗಳಿಗೆ ಸತ್ಕರಿಸಿದರು.

ಚಂದ್ರಶೇಖರ ಮಹಾಸ್ವಾಮಿಗಳು ಮಾತನಾಡಿ ಕರ್ನಾಟಕ ರಾಜ್ಯೋತ್ಸವ ವನ್ನು ನವೆಂಬರ್ 1 ರಂದು ಬೆಳಗಾವಿ ನಗರದಲ್ಲಿ ಅದ್ದೂರಿಯಾಗಿ ಆಚರಿಸಿದರೆ ನವೆಂಬರ್ 23 ರಂದು ಹುಕ್ಕೇರಿ ನಗರದಲ್ಲಿ ವಿಬೃಂಜನೆಯಿಂದ ಆಚರಿಸುತ್ತಾರೆ ,ಗಡಿ ಭಾಗದಲ್ಲಿ ಕನ್ನಡ ಉಳುವಿಗಾಗಿ ಯುವಕರು ಉತ್ಸಾಹದಿಂದ ರಾಜ್ಯೋತ್ಸವ ಆಚರಿಸಬೇಕು ಎಂದರು.

ಈ ಸಂದರ್ಭದಲ್ಲಿ ಗುರುರಾಜ ಕುಲಕರ್ಣಿ, ಎ ಕೆ ಪಾಟೀಲ, ರಾಜು ಮುನ್ನೋಳ್ಳಿ, ರಮೇಶ ಬೋರಗಾಂವಿ, ಕುಮಾರ ಜುಟಾಳೆ, ಭೀಮಶಿ ಗೋರಕನಾಥ ಸೇರಿದಂತೆ ರಾಜ್ಯೋತ್ಸವ ಉತ್ಸಹಿ ಸಮಿತಿ ಸದಸ್ಯರು,ಯುವಕರು, ಕನ್ನಡ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ