Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಲ್ಯಾಣ ಕರ್ನಾಟಕದ ಯುವಜನತೆಯ ಪಾಲಿನ ಜ್ಞಾನ ದೇಗುಲ “ಪ್ರಬುದ್ಧ ಅಕಾಡೆಮಿ”


ಬಳ್ಳಾರಿ,ಮೇ,20 :ಕಲ್ಯಾಣ ಕರ್ನಾಟಕ ಭಾಗವು ಅಪಾರ ಪ್ರತಿಭೆ ಮತ್ತು ಜ್ಞಾನಸಂಪತ್ತನ್ನು ಹೊಂದಿರುವ ಪ್ರದೇಶ. ಆದರೆ, ಸೂಕ್ತ ಮಾರ್ಗದರ್ಶನ, ಗುಣಮಟ್ಟದ ತರಬೇತಿ ಹಾಗೂ ಆಧುನಿಕ ಸಂಪನ್ಮೂಲಗಳ ಕೊರತೆಯಿಂದಾಗಿ ಈ ಭಾಗದ ನೂರಾರು ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಬೆಂಗಳೂರು, ದೆಹಲಿ ಅಥವಾ ಹೈದರಾಬಾದ್ ನಂತಹ ಮಹಾನಗರಗಳಿಗೆ ವಲಸೆ ಹೋಗಬೇಕಾದ ಅನಿವಾರ್ಯತೆ ಇತ್ತು. ಇದರಿಂದಾಗಿ ಬಡ ಮತ್ತು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಆರ್ಥಿಕ ಹೊರೆ ಹೆಚ್ಚಾಗುತ್ತಿತ್ತು.
ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವನೆಯನ್ನು ಹೆಚ್ಚಿಸುವ ಮತ್ತು ಅವರಿಗೆ ಉನ್ನತ ಭವಿಷ್ಯವನ್ನು ರೂಪಿಸುವ ಮಹತ್ತರ ಉದ್ದೇಶದೊಂದಿಗೆ ಕಲಬುರಗಿಯಲ್ಲಿ ಅತ್ಯಾಧುನಿಕ ಪರೀಕ್ಷಾ ಪೂರ್ವ ತರಬೇತಿ ಕೇಂದ್ರವಾದ “ಪ್ರಬುದ್ಧ ಅಕಾಡೆಮಿ”ಯನ್ನು ಸ್ಥಾಪಿಸಲಾಗಿದೆ.
ಕಲಬುರಗಿ ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಸಂಯೋಗದೊAದಿಗೆ ಕಲಬುರಗಿ ನಗರದ ಅಟಲ್ ಬಿಹಾರಿ ವಾಜಪಾಯಿ ಬಡಾವಣೆಯಲ್ಲಿ ಅಂದಾಜು ರೂ. 25 ಕೋಟಿ ಅನುದಾನದಲ್ಲಿ 10,449.35 ಚದರ ಮೀಟರ್ ವಿಸ್ತೀರ್ಣದ ಈ ಭವ್ಯ ಕೇಂದ್ರವನ್ನು ನಿರ್ಮಿಸಲಾಗಿದೆ.
ವಿದ್ಯಾರ್ಥಿಗಳ ಸಮಗ್ರ ಅಧ್ಯಯನಕ್ಕಾಗಿ ಇಲ್ಲಿ ವಿಶ್ವದರ್ಜೆಯ ಮೂಲಸೌಕರ್ಯಗಳನ್ನು ಕಲ್ಪಿಸಲಾಗಿದೆ:
• ಆಧುನಿಕ ತಂತ್ರಜ್ಞಾನ ಹೊಂದಿರುವ, ತಲಾ 125 ಆಸನ ಸಾಮರ್ಥ್ಯದ 4 ವಿಶಾಲವಾದ ತರಬೇತಿ ಕೊಠಡಿಗಳು.
• ಅಂದಾಜು 100 ವಿದ್ಯಾರ್ಥಿ ಸಾಮರ್ಥ್ಯದ, ಎಲ್ಲಾ ಸ್ಪರ್ಧಾತ್ಮಕ ಪರೀಕ್ಷಾ ಪುಸ್ತಕಗಳನ್ನೊಳಗೊಂಡ ಸುಸಜ್ಜಿತ ಗ್ರಂಥಾಲಯ ಮತ್ತು ಡಿಜಿಟಲ್ ಲೈಬ್ರರಿ.
• ಸ್ವಯಂ ಅಧ್ಯಯನಕ್ಕಾಗಿ ಪ್ರತ್ಯೇಕ ಕ್ಯುಬಿಕಲ್ಸ್ ಮತ್ತು ತಜ್ಞರಿಂದ ವೈಯಕ್ತಿಕ ಮಾರ್ಗದರ್ಶನಕ್ಕಾಗಿ ಮೆಂಟರಿAಗ್ ಕೊಠಡಿಗಳು.
ರಿಯಾಯಿತಿ ದರದಲ್ಲಿ ಗುಣಮಟ್ಟದ ಆಹಾರ ನೀಡುವ ಉಪಹಾರ ಕೇಂದ್ರ ಮತ್ತು ಪ್ರಶಾಂತ ಶೈಕ್ಷಣಿಕ ವಾತಾವರಣಕ್ಕಾಗಿ ಸುಂದರವಾದ ಗಾರ್ಡನ್ ಸೌಲಭ್ಯ ಇರುತ್ತದೆ.
ಪ್ರಸ್ತುತ, ಈ ಅಕಾಡೆಮಿಯಲ್ಲಿ  ಐ.ಎ.ಎಸ್ ಹಾಗೂ ಕೆ.ಎ.ಎಸ್ ಪರೀಕ್ಷೆಗಳ ಉಚಿತ ಪೂರ್ವಭಾವಿ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಈ ತರಬೇತಿ ಕಾರ್ಯಕ್ರಮವು ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ಮಾತ್ರ ಸೀಮಿತವಾಗಿದ್ದು, ಯಾವುದೇ ಪದವಿ ಹೊಂದಿರುವ ಅಥವಾ ಅಂತಿಮ ವರ್ಷದ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಕನಿಷ್ಠ 21 ವರ್ಷಗಳು ಮತ್ತು ಗರಿಷ್ಠ 37 ವರ್ಷಗಳ ವಯೋಮಿತಿಯೊಳಗಿರಬೇಕು. ಅರ್ಜಿ ಸಲ್ಲಿಸಲು ಮೇ 21 ಕೊನೆಯ ದಿನವಾಗಿದೆ.
*ತರಬೇತಿ ಪ್ರಕ್ರಿಯೆ ಮತ್ತು ಆಯ್ಕೆ ವಿಧಾನ:*
ಪಾರದರ್ಶಕ ಆಯ್ಕೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಏಇಂ) ಮೂಲಕ ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ವಿಶೇಷ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಿ, ಸಂಪೂರ್ಣ ಅರ್ಹತೆ ಮತ್ತು ಪಾರದರ್ಶಕತೆಯ ಆಧಾರದ ಮೇಲೆ 500 ವಿದ್ಯಾರ್ಥಿಗಳನ್ನು ತರಬೇತಿಗಾಗಿ ಆಯ್ಕೆ ಮಾಡಲಾಗುತ್ತದೆ.
ಸಮಗ್ರ ಮಾರ್ಗದರ್ಶನ: ಆಯ್ಕೆಯಾದ ಅಭ್ಯರ್ಥಿಗಳಿಗೆ ದೇಶದ ಪ್ರತಿಷ್ಠಿತ ತರಬೇತಿ ಸಂಸ್ಥೆಯಿAದ 10 ತಿಂಗಳುಗಳ ಕಾಲ ಉಚಿತ ಮತ್ತು ಗುಣಮಟ್ಟದ ತರಬೇತಿಯನ್ನು ನೀಡಲಾಗುತ್ತದೆ. ಈ ತರಬೇತಿಯು ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ ಹಾಗೂ ಸಂದರ್ಶನ ಒಳಗೊಂಡAತೆ ಮೂರೂ ಹಂತಗಳಿಗೆ ಸಂಪೂರ್ಣ ಮಾರ್ಗದರ್ಶನವನ್ನು ನೀಡಲು ಉದ್ದೇಶಿಸಿದೆ.
*ತರಬೇತಿಯ ವಿಶೇಷತೆ:*
ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಸ್ತುತ ಬೇಡಿಕೆಗಳಿಗೆ ತಕ್ಕಂತೆ ಇಲ್ಲಿನ ಬೋಧನಾ ಕ್ರಮವನ್ನು ವಿನ್ಯಾಸಗೊಳಿಸಲಾಗಿದೆ. ವಿದ್ಯಾರ್ಥಿಗಳಲ್ಲಿ ಪರಿಕಲ್ಪನಾತ್ಮಕ ತಿಳುವಳಿಕೆ, ವಿಶ್ಲೇಷಣಾತ್ಮಕ ಕೌಶಲ್ಯಗಳು, ಪ್ರಚಲಿತ ವಿದ್ಯಮಾನಗಳ ಆಳವಾದ ಜ್ಞಾನ ಮತ್ತು ಸಂದರ್ಶನ ಎದುರಿಸುವ ಆತ್ಮವಿಶ್ವಾಸವನ್ನು ಹೆಚ್ಚಿಸಲು ವಿಶೇಷ ಒತ್ತು ನೀಡಲಾಗುತ್ತದೆ. ಶೈಕ್ಷಣಿಕ ತರಬೇತಿಯ ಜೊತೆಗೆ ಸಮಗ್ರ ವ್ಯಕ್ತಿತ್ವ ವಿಕಸನ ಮಾರ್ಗದರ್ಶನವನ್ನೂ ನೀಡಲಾಗುತ್ತಿದ್ದು, ಇದು ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮಾನತೆಯನ್ನು ತರಲು ಗಣನೀಯ ಕೊಡುಗೆ ನೀಡಲಿದೆ.  *ಅರ್ಜಿ ಸಲ್ಲಿಸುವ ವಿಧಾನ:*
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ ಸೈಟ್ www.kalaburagi.nic.inಗೆ ಭೇಟಿ ನೀಡಬಹುದು ಅಥವಾ ಪ್ರಕಟಣೆಯಲ್ಲಿ ನೀಡಿರುವ ಕ್ಯೂಆರ್ ಕೋಡ್ ಅನ್ನು ಸ್ಕಾö್ಯನ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದಾಗಿದೆ.
*ಭವಿಷ್ಯದ ದೃಷ್ಟಿಕೋನ ಮತ್ತು ಪ್ರಾದೇಶಿಕ ಪ್ರಗತಿ:*
ಕಲಬುರಗಿಯಲ್ಲಿ ಸ್ಥಾಪಿತವಾಗಿರುವ ಈ ಅಕಾಡೆಮಿಯು ಕೇವಲ ಒಂದು ತರಬೇತಿ ಕೇಂದ್ರವಾಗಿ ಉಳಿಯದೆ, ಇಡೀ ಉತ್ತರ ಕರ್ನಾಟಕ ಭಾಗದ ಶೈಕ್ಷಣಿಕ ಚಿತ್ರಣವನ್ನು ಬದಲಾಯಿಸುವ ಶಕ್ತಿಯನ್ನು ಹೊಂದಿದೆ.
ಸ್ಥಳೀಯ ಯುವಕರು ನಾಗರಿಕ ಸೇವೆಗಳು ಹಾಗೂ ಉನ್ನತ ವೃತ್ತಿಪರ ಕ್ಷೇತ್ರಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರೇರೇಪಿಸುವ ಮೂಲಕ, ಈ ಪ್ರದೇಶದಲ್ಲಿ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮಾನತೆಯನ್ನು ತರಲು ಇದೊಂದು ಐತಿಹಾಸಿಕ ಹೆಜ್ಜೆಯಾಗಿದೆ. ಮುಂದಿನ ದಿನಗಳಲ್ಲಿ ಈ ಕೇಂದ್ರವು ಪ್ರಮುಖ ವಿಶ್ವವಿದ್ಯಾಲಯಗಳು ಹಾಗೂ ಜಾಗತಿಕ ಮಾರ್ಗದರ್ಶನ ಜಾಲಗಳೊಂದಿಗೆ ಪಾಲುದಾರಿಕೆ ಮಾಡಿಕೊಳ್ಳುವ ಮೂಲಕ ಮತ್ತಷ್ಟು ಎತ್ತರಕ್ಕೆ ಬೆಳೆಯುವ ಸರ್ವ ಸಾಧ್ಯತೆಗಳನ್ನು ಹೊಂದಿದೆ.
ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವನೆಯನ್ನು ಹೆಚ್ಚಿಸುವ ಮತ್ತು ಅವರಿಗೆ ಉನ್ನತ ಭವಿಷ್ಯವನ್ನು ರೂಪಿಸುವ ಮಹತ್ತರ ಉದ್ದೇಶದೊಂದಿಗೆ ಕಲಬುರಗಿಯಲ್ಲಿ “ಪ್ರಬುದ್ಧ ಅಕಾಡೆಮಿ”ಯನ್ನು ಸ್ಥಾಪಿಸಲಾಗಿದೆ.
ಈ ಯೋಜನೆಯು ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಉನ್ನತಿಗೆ ನೆರವಾಗುವುದರ ಜೊತೆಗೆ, ಈ ಭಾಗದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮಾನತೆಯನ್ನು ಸಾಧಿಸುವ ನಿಟ್ಟಿನಲ್ಲಿ ಒಂದು ಮಹತ್ವದ ಹೆಜ್ಜೆಯಾಗಿದೆ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*