ಮೂಡಲಗಿ : ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬಾಗಲಕೋಟೆಯ, ಕಿತ್ತೂರ ರಾಣಿ ಚೆನ್ನಮ್ಮ ತೋಟಗಾರಿಕೆ ಮಹಾವಿದ್ಯಾಲಯ ಅರಭಾವಿಯ ಅಂತಿಮ ವ?ದ ಬಿ.ಎಸ್ಸಿ (ತೋಟಗಾರಿಕೆ) ವಿದ್ಯಾರ್ಥಿಗಳ ಗ್ರಾಮೀಣ ತೋಟಗಾರಿಕೆ ಕಾರ್ಯಾನುಭವ ಶಿಬಿರವನ್ನು ರಾಮದುರ್ಗ ತಾಲೂಕಿನ ಗೊಡಚಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದು, ಶಿಬಿರದಲ್ಲಿ ವಿದ್ಯಾರ್ಥಿಗಳು ದಿ.೨೪ರಂದು ಜೈವಿಕ ಗೊಬ್ಬರಗಳ ಅರಿವು ಮೂಡಿಸಲು ಹಾಗೂ ರಾಸಾಯನಿಕ ಗೊಬ್ಬರಗಳ ಬಳಕೆಯನ್ನು ನಿಯಂತ್ರಿಸಲು ಭಿತ್ತಿಪತ್ರ ಹಾಗೂ ಮಾಹಿತಿ ಫಲಕಗಳ ಮೂಲಕ ರೈತರಿಗೆ ಅರಿವು ಮೂಡಿಸಲಾಯಿತು.
ಇತ್ತೀಚಿನ ದಿನಗಳಲ್ಲಿ ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಭೂಮಿಯು ತನ್ನ ಫಲವತ್ತತೆಯನ್ನು ಕಳೆದುಕೊಳ್ಳುತ್ತಿದೆ ಇದರಿಂದಾಗಿ ಇಳುವರಿ ಗಣನೀಯವಾಗಿ ಕಡಿಮೆಯಾಗುತ್ತಿದೆ. ಆದ್ದರಿಂದ ಜೈವಿಕ ಗೊಬ್ಬರಗಳನ್ನು ಉಪಯೋಗಿಸುವುದರಿಂದ ಮಣ್ಣಿನ ಫಲವತ್ತತೆಯನ್ನು ಹೆಚ್ಚಿಸಬಹುದಾಗಿದೆ ಎಂದು ಸಾರಿದರು.
ಈ ಸಮಯದಲ್ಲಿ ಡಾ.ದೀಲಿಪಕುಮಾರ ಮಸೂತಿ ಹಾಗೂ ಡಾ.ರಾಘವೇಂದ್ರ, ಸಹಾಯಕ ಪ್ರಾಧ್ಯಾಪಕರು ಮಾರ್ಗದರ್ಶನ ನೀಡಿದರು.