*ಸಂಡೂರು ಆ.27:.ತಾಲೂಕು ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಪಟ್ಟಣದ ಎಸ್ಇಎಸ್ ವಿದ್ಯಾಮಂದಿರ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪಟ್ಟಣದ ಎಸ್ಇಎಸ್ ವಿದ್ಯಾಮಂದಿರದಲ್ಲಿ ನಡೆದ ತಾಲೂಕು ಮಟ್ಟದ ಸ್ಪರ್ಧೆಯಲ್ಲಿ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಈ ಸ್ಪರ್ಧೆಯಲ್ಲಿ ಎಸ್ಇಎಸ್ ವಿದ್ಯಾಮಂದಿರದ ಪಿಯುಸಿ ಪ್ರಥಮ ವರ್ಷದ ವಿದ್ಯಾರ್ಥಿಗಳಾದ ಶಬಾನಾ ಎಂ., ರೋಹಿತ್ ಕುಮಾರ್ ಕೆ.ಎಂ., ಮೊಹಮ್ಮದ್ ಶಾಹಿಲ್ ಹಾಗೂ ದ್ವಿತೀಯ ವರ್ಷದ ವಿದ್ಯಾರ್ಥಿಗಳಾದ ಚಂದ್ರಿಕಾ ಬಾಯಿ, ಅಕ್ಷತಾ ನಾಗೋಡ, ಪವನ್ ಎಂ.ಎನ್. ಅವರು ಅತ್ಯುತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಪಡೆದಿದ್ದಾರೆ.
ಪ್ರಥಮ ಸ್ಥಾನ ಪಡೆಯುವ ಮೂಲಕ ಕಾಲೇಜಿನ ಕೀರ್ತಿ ಹೆಚ್ಚಿಸಿರುವ ವಿದ್ಯಾರ್ಥಿಗಳು ಇದೀಗ ಜಿಲ್ಲಾಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ವಿದ್ಯಾಮಂದಿರದ ಕಾರ್ಯದರ್ಶಿ ಡಾ. ಜಗದೀಶ್ ಬಸಾಪುರ, ಕಾಲೇಜು ಪ್ರಾಚಾರ್ಯ ಬಿ. ಶ್ರೀನಿವಾಸ್ ಸೇರಿದಂತೆ ಕಾಲೇಜಿನ ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ. ವಿದ್ಯಾರ್ಥಿಗಳಿಗೆ ಶುಭ ಹಾರೈಸಿ, ಜಿಲ್ಲಾಮಟ್ಟದಲ್ಲೂ ಉತ್ತಮ ಸಾಧನೆ ಮಾಡುವಂತೆ ಹಾರೈಸಿದ್ದಾರೆ.