Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

 ಧರ್ಮಂ‌  ಕನ್ನಡಕ್ಕೆ ವಿಶೇಷವಾದ ಚಿತ್ರ



     "ಜಾತಿಯಲ್ಲಿ ಹಿಂದುಳಿಯುವುದಲ್ಲ.. ಜೀವನದಲ್ಲಿ ಮುಂದೆ ಬರದಂತೆ ನೋಡಿಕೊಳ್ಳಬೇಕು.. ಇಲ್ಲಿ ನ್ಯಾಯ ನೀತಿ ಧರ್ಮಕ್ಕೆ ಬೆಲೆ ಇಲ್ಲ. ಅವ್ನಾ ಉಸಿರಾಡೋಕೆ ಬಿಟ್ಟರೆ ನಮಗೇ  ತೊಂದರೆ. ಧರ್ಮ ಉಳಿಬೇಕಂದ್ರೆ ನಿನ್ನ ಜಾತಿ ಸಾಯಬೇಕು"

      ಹಳ್ಳಿಯ ಹಿನ್ನೆಲೆಯಲ್ಲಿ ರಗಡ್ ಲುಕ್ ನಲ್ಲಿರುವ 'ಧರ್ಮಂ' ಚಿತ್ರದ ಖಡಕ್ ಸಂಭಾಷಣೆ ಇರುವ ಟ್ರೇಲರ್ ನಲ್ಲಿ ಶೋಷಣೆ ,ದಬ್ಬಾಳಿಕೆ, ಸೇರಿದಂತೆ ಆಕ್ಷನ್ ಸನ್ನಿವೇಶ ಹದಗೊಳಿಸಿ ಚಿತ್ರವನ್ನು ತೆರೆಗೆ ಕಟ್ಟಿಕೊಡಲಾಗಿದ್ದು ಡಿಸೆಂಬರ್ 5 ರಂದು ಚಿತ್ರ ತೆರೆಗೆ ಬರಲಿದ್ದು ಚಿತ್ರದ ಬಗ್ಗೆ ಮತ್ತಷ್ಟು ಕುತೂಹಲ ಕೆರಳಿಸಿದೆ.

    'ಧರ್ಮಂ‌' ಚಿತ್ರದ ಟ್ರೇಲರ್ ನ ನಿರ್ದೇಶಕ ತರುಣ್ ಕಿಶೋರ್ ಸುಧೀರ್ ಬಿಡುಗಡೆ ಮಾಡಿ ಶುಭ ಹಾರೈಸಿದರು. ಈ ವೇಳೆ ಚಿತ್ರದ ಹಾಡುಗಳ ಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು

      ಮುಖ್ಯ ಅತಿಥಿಯಾಗಿ ಆಗಮಿಸಿದ್ದ ನಿರ್ದೇಶಕ ತರುಣ್ ಕಿಶೋರ್ ಸುಧೀರ್ ಮಾತನಾಡಿ "ಪವರ್ ಫುಲ್ ಶೀರ್ಷಿಕೆ , ಡುಯೆಟ್ ಹಾಡು   ನೋಡಿ ಚಿತ್ರದ ಬಗ್ಗೆ ಆಕರ್ಷಿತನಾಗಿದ್ದೆ. ಚಿತ್ರದ ಛಾಯಾಗ್ರಾಹಕನಿಗೆ ಒಳ್ಳೆಯ ಭವಿಷ್ಯವಿದೆ. ಟ್ರೇಲರ್ ನೋಡಿದಾಗಲೇ ಪ್ರೇಕ್ಷಕರನ್ನು  ಚಿತ್ರ ಹಿಡಿದು ಕೂರಿಸಲಿದೆ.‌ 80ರ ದಶಕದ ಚಿತ್ರವನ್ನು ಅತ್ಯುತ್ತಮವಾಗಿ ಕಟ್ಟಿಕೊಟ್ಟಿದ್ದೀರಿ. ಚಿತ್ರಕ್ಕೆ ನೀವೂ ಒಬ್ಬ ನಾಯಕ. ನಾಯಕಿ ವಿರಾಣಿಕ ಶೆಟ್ಟಿ ಮತ್ತು ನಾಯಕ ಸಾಯಿ ಶಶಿಕುಮಾರ್ ಉತ್ತಮವಾಗಿ ನಟಿಸಿದ್ದಾರೆ. 'ಧರ್ಮಂ' ಚಿತ್ರದ ವಿಷಯವನ್ನು ಯಾವುದೇ ಪೂರ್ವಾಗ್ರಹ ಪೀಡಿತವಿಲ್ಲದೆ  ಚಿತ್ರವನ್ನು ತೆರೆಗೆ ಕಟ್ಟಿಕೊಡಬೇಕು. ನಾವೂ ಕೂಡ 'ಕಾಟೇರ' ಚಿತ್ರವನ್ನು ಇದೇ ರೀತಿ ಮಾಡಿದ್ದೆವು ಒಳ್ಳೆಯದಾಗಲಿ.

ಜನಕ್ಕೆ ಒಳ್ಳೆಯ ಸಿನಿಮಾ‌ ಕೊಡಬೇಕು.. ಅವನಿಗೆ ನಂಬಿಕೆ ಬರುವ ಸಿನಿಮಾ‌‌ಕೊಟ್ಟರೆ ಚಿತ್ರಮಂದಿರಕ್ಕೆ ಬರುತ್ತಾರೆ. ಅದೇ ರೀತಿ ಧರ್ಮಂ‌ ಚಿತ್ರ ನಿರ್ಮಾಪಕರಿಗೂ ಒಳ್ಳೆಯದಾಗಲಿ" ಎಂದು ಹಾರೈಸಿದರು

     ನಿರ್ದೇಶಕ ನಾಗಮುಖ "ತಂದೆ, ತಾಯಿ ಹಾಗು ನಿಕ್‌ ನೇಮ್ ಸೇರಿಸಿ ನಾಗಮುಖ ಅಂತ ಹೆಸರು ಇಟ್ಟುಕೊಂಡಿದ್ದೇನೆ. ನನ್ನ ಹೆಸರು ನಾಗರಾಜು. ಜಾತಿ ಮತ್ತು ಹಿಂದು ಧರ್ಮದ ಹಿನ್ನೆಲೆಯಲ್ಲಿ ಚಿತ್ರ ಮಾಡಲಾಗಿದೆ. ಹಿಂದುತ್ವ ಉಳಿಬೇಕು ಎನ್ನುವುದು ನಮ್ಮ ಉದ್ದೇಶ .ಚಿತ್ರದ

ಟ್ರೇಲರ್ ನಲ್ಲಿ ಕಠಿಣವಾದ ವಿಷಯವನ್ನು ತೆರೆಯ ಮೇಲೆ ತಂದಿದ್ದೇವೆ. ಹಿಂದೂ ಧರ್ಮವನ್ನು ಎತ್ತಿ ಹಿಡಿಯುವ ಕೆಲಸ ಮಾಡಿದ್ದೇನೆ. ಮೇಲು ಕೀಳಿನಿಂದ‌ ಧರ್ಮ ಹೇಗೆ ಸೊರಗುತ್ತಿದೆ. ಅದನ್ನು ಅಪವಿತ್ರ. ಮಾಡದೆ ಧರ್ಮ ಕಾಪಾಡಬೇಕು ಎನ್ನುವುದು ಚಿತ್ರದ ಉದ್ದೇಶ" ಎಂದುರು.

     ನಾಯಕ ಸಾಯಿ ಶಶಿಕುಮಾರ್  "ಚಿತ್ರದಲ್ಲಿ ಕರಿಮುತ್ತು ಎನ್ನುವ ಪಾತ್ರ ಮಾಡಿದ್ದೇನೆ. ಜೀವನದ ಪ್ರಮುಖ ಚಿತ್ರ. ಇಡೀ ತಂಡಕ್ಕೆ ಧನ್ಯವಾದ. ಡಿಸೆಂಬರ್ 5 ಕ್ಕೆ ಸಿನಿಮಾ‌ ಬರ್ತಾ ಇದೆ ಸಿನಿಮಾ‌ ನೋಡಿ ಬೆಂಬಲಿಸಿ" ಎಂದು ಮನವಿ ಮಾಡಿದರು

     ನಾಯಕಿ ವಿರಾಣಿಕ ಶೆಟ್ಟಿ "ಚಿತ್ರದಲ್ಲಿ ನೀಲಾ ಎನ್ನುವ ಪಾತ್ರ ಮಾಡಿದ್ದೇನೆ. ಗಂಡಸರನ್ನು ಕಂಡರೆ ಕತ್ತೆತ್ತಿ‌ ನೋಡದ ಹುಡುಗಿ ಪಾತ್ರ.  ಆಡಿಷನ್ ನಲ್ಲಿ ಮೂರು ಪೇಜ್ ಡೈಲಾಗ್ ಅನ್ನು ಸಿಂಗಲ್ ಟೈಕ್ ಮಾಡಿದ್ದೆ ಆ ನಂತರ ನಿರ್ದೇಶಕರು ಆಯ್ಕೆ‌ ಮಾಡಿದರು. ಈ ವರ್ಷ ಮೂರನೇ ಚಿತ್ರ ಬಿಡುಗಡೆ ಆಗುತ್ತಿದೆ. ದೊಡ್ಡ ದೊಡ್ಡ ನಿರ್ದೇಶಕರು ಚಿತ್ರದ ಹಾಡಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.‌ಇದು ಇನ್ನಷ್ಟು ಆತ್ಮ‌ವಿಶ್ವಾಸ ಹೆಚ್ಚಿಸಿದೆ" ಎಂದರು

     ನಿರ್ಮಾಪಕ ಡಾ. ಎಸ್ ಕೆ ರಾಮಕೃಷ್ಣ  "ಸಿನಿಮಾ‌ ಬಗ್ಗೆ ಯಾವುದೇ ಅನುಭವ ಇರಲಿಲ್ಲ.‌ನಿರ್ದೇಶಕ ನಾಗಮುಖ ಸ್ನೇಹಿತರು. ಅವಕಾಶ ಸಿಗ್ತಾ ಇಲ್ಲ ಸಿನಿಮಾ‌ ಮಾಡಬೇಕು ಎಂದರು. ಒದ್ದಾಟ ನೋಡಿ ಸಿನಿಮಾ‌ ನಿರ್ಮಾಣಕ್ಕೆ ಮುಂದಾದೆ. ಚಿತ್ರ ನೋಡಿದ ಮಂದಿಗೆ ಇಷ್ಟವಾಗಲಿದೆ. ಪ್ರೇಕ್ಷಕ ಕೊಡುವ ಕಾಸಿಗೆ ಚಿತ್ರ ಮೋಸ ಮಾಡುವುದಿಲ್ಲ. ಚಿತ್ರ ಇನ್ನಷ್ಟು ಸಿನಿಮಾ‌ ಮಾಡಲು ಪ್ರೋತ್ಸಾಹ ನೀಡಿ" ಎಂದರು

     ಹಿರಿಯ ಕಲಾವಿದ ಅಶೋಕ್ ಹೆಗ್ಡೆ  "ನಿರ್ದೇಶಕ ನಾಗಮುಖ ಒಳ್ಳೆಯ ಸಿನಿಮಾ‌ ಮಾಡಿದ್ದಾರೆ  ಚಿತ್ರಮಂದಿರಕ್ಕೆ ಬನ್ನಿ" ಎಂದರು.

     ಕಲಾವಿದ ಭೀಷ್ಮ ರಾಮಯ್ಯ

"ಧರ್ಮವನ್ನು‌ ಕೊಲ್ಲಲು ಹುಟ್ಟಿರುವ ಚಿತ್ರದ ಅಧರ್ಮೀಯರಲ್ಲಿ ನಾನೂ ಒಬ್ಬ. ಈ ವರೆಗೆ 38 ಚಿತ್ರಗಳಲ್ಲಿ ನಟಿಸಿದ್ದೇನೆ. ಚಿತ್ರದಲ್ಲಿ ವಿಭಿನ್ನತೆ ಕಾಣಲಿದೆ. ಹಾಡು

ಟ್ರೇಲರ್ ಇಷ್ಟವಾಗಲಿದೆ. ರೋಷ ಆವೇಶ, ಆಕ್ರೋಶ ಮತ್ತು ತುಳಿತಕ್ಕೊಳಗಾದ ಜನರ ಸಿನಿಮಾ. ಕನ್ನಡಕ್ಕೆ‌ ವಿಶೇಷವಾದ ಸಿನಿಮಾ ಆಗಲಿದೆ" ಎಂದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ