Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

 ನಿವೃತ್ತಿ ಪಡೆದು ತವರಿಗೆ ಬಂದ ಸೈನಿಕನಿಗೆ ಗ್ರಾಮಸ್ಥರಿಂದ ಅದ್ದೂರಿ ಸ್ವಾಗತ




ಬೈಲಹೊಂಗಲ: ತಾಯ್ನಾಡಿನ ರಕ್ಷಣೆಗಾಗಿ ಸೈನ್ಯ ಸೇರಿ ಸೇವಾ ನಿವೃತ್ತಿಯವರೆಗೆ ಸುದೀರ್ಘವಾಗಿ ವೈರಿಗಳ ಜೋತೆ ಸದಾ ಹೋರಾಟ ನಡೆಸಿ ಸುರಕ್ಷಿತವಾಗಿ ಮನೆಗೆ ಬಂದ ನಂತರ  ತಮ್ಮ ಕುಟುಂಬದ ಜೋತೆ ಸುಖಜೀವನ ನಡೆಸುವದರೊಂದಿಗೆ ಸಮಾಜ ಸೇವೆಗೆ ಸೈನಿಕರ ಬದುಕು ಮುಡಪಾಗಿರಬೇಕೆಂದು ಗುರು ಮಡಿವಾಳೇಶ್ವರ ಮಠದ ಪೀಠಾದಿಪತಿ ಗಂಗಾಧರ ಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದರು.


ಸಮೀಪದ ಹೊಸೂರ ಗ್ರಾಮದ ಸೈನಿಕ ಫಕೀರಪ್ಪ ಕುರಿ ಅವರು 18ವರ್ಷಗಳ ಕಾಲ ಭಾರತೀಯ ಸೈನ್ಯದಲ್ಲಿ ಸೇವೆ ಅಲ್ಲಿಸಿ ನಿವೃತ್ತಿಯಾದ ಪ್ರಯುಕ್ತ ಗ್ರಾಮದ ಮರಡಿ ಬಸವೇಶ್ವರ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ ಸೇವಾನಿವೃತ್ತ ಅಭಿನಂದನಾ ಸಮಾರಂಭದ ಸಾನಿಧ್ಯವಹಿಸಿ ಮಾತನಾಡಿ, ಭಾರತದ ರಕ್ಷಣೆಗೆ ಸೇರಿದ ನಂತರ ಸೈನಿಕರ ಜೀವನ ದೇಶಕ್ಕಾಗಿ ಸಮರ್ಪಿತವಾಗಿರುತ್ತದೆ. ಸದಾ ವೈರಿಗಳ ಗುಂಡಿನ ಕಾಳಗದಲ್ಲಿ ಜೀವವನ್ನು ಪಣಕ್ಕಿಟ್ಟು ಸದಾ  ಹೋರಾಟಮಾಡುವ ಅವರ ಧೈರ್ಯ, ಶೌರ್ಯ ಅವರ ಸಾಹಸ ಮೆಚ್ಚುವಂತದ್ದು ಎಂದರು.


ಮುಖ್ಯ ಅತಿಥಿಯಾಗಿದ್ದ ಎಪಿಎಂಸಿ ಮಾಜಿ ಅಧ್ಯಕ್ಷ ಎಫ್.ಎಸ್‌ ಸಿದ್ದ‌ನಗೌಡರ ಮಾತನಾಡಿ, ತಂದೆ, ತಾಯಿ ಹೆಂಡತಿ  ಮಕ್ಕಳು ಹಾಗೂ ಬಂಧುಗಳ ಪ್ರತಿ ವಾತ್ಸಲ್ಯದಿಂದ ವಂಚಿತವಾದರು ದೇಶ ಸೇವೆ ಮಾಡುವ ಮಹಾದಾಸೆಯಿಂದ ಭಾರತಾಂಭೆಯ ರಕ್ಷಣೆಗಾಗಿ ಸೈನ್ಯ ಸೇರುವ ಯುವಕರ ಶಿಸ್ತುಬಧ್ದ ಜೀವನ ನಾಗರಿಕ ಸಮಾಜದಲ್ಲಿ ಬದುಕುವ ಪ್ರತಿಯೊಬ್ಬರಿಗೂ ಆದರ್ಶಪ್ರಾಯವಾದದ್ದು. ಅವರ ಸಮಯ ಪ್ರಜ್ಞೆ ಕೆಲಸದ ಅಚ್ಚುಕಟ್ಟುತನ, ದೇಹ ದೃಢತೆಯ ಉತ್ತಮ ಆರೋಗ್ಯವನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು.


ದಿನದ 24 ಘಂಟೆಗಳ ಕಾಲ ಗಡಿಯಲ್ಲಿ ಮಳೆ, ಮೈ ಕೊರೆಯುವ ಮೈನಸ್ 24ಡಿಗ್ರಿ  ಚಳಿಯಲ್ಲಿ 48ಡಿಗ್ರಿ ಬಿಸಿಲಿನಲ್ಲಿ  ಸದಾ ಗಡಿಕಾಯುವ ಫಲದಿಂದ ಇಂದು ದೇಶದ ಜನತೆ ನೆಮ್ಮದಿ ಜೀವನ ಸಾಗಿಸುತಿದ್ದೆವೆ.  ಪ್ರಪಂಚದಲ್ಲಿ ಇಂದು ಭಾರತದ ಸೈನ್ಯ ಅತ್ಯಂತ ಉಚ್ಚಸ್ಥಿತಿಗೆ ಬಂದಿದೆ. ಅಂತಹ ಬಲಾಡ್ಯ ಸೈನ್ಯದಲ್ಲಿ ಸೇವೆ ಸಲ್ಲಿಸಿ ಗ್ರಾಮಕ್ಕೆ ಆಗಮಿಸಿದ ಫಕೀರಪ್ಪ ಕುರಿಯ ನಿವೃತ್ತಿ ಜೀವನ ಸುಖಸಮೃದ್ದಿಯಿಂದ ಕೂಡಿರಲಿ. ಸೈನ್ಯ ಸೇರಲು ಬಯಸುವ ಗ್ರಾಮದ ಯುವಕರಿಗೆ ಅವರ ಮಾರ್ಗದರ್ಶನ ನೀಡಲಿ. ಸಮಾಜಕ್ಕೆ ಅವರ ಸೇವೆ ಅತ್ಯಂತ ಅವಶ್ಯಕವಾಗಿದ್ದು ಆ ನಿಟ್ಟಿನಲ್ಲಿ  ಕಾರ್ಯಪ್ರವರ್ತರಾಗಲಿ ಎಂದರು.


   ಗ್ರಾಮದ ಮುಖಂಡರಾದ ಗುರುಪಾದ ಕಳ್ಳಿ, ಮಹಾಂತೇಶ ಮತ್ತಿಕೊಪ್ಪ, ಮಲ್ಲಿಕಾರ್ಜುನ ಹುಂಬಿ ಮಾತನಾಡಿ ದೇಶದಲ್ಲಿ ರಕ್ಷಣೆಗಾಗಿ ಸೈನಿಕ, ಅನ್ನಕ್ಕಾಗಿ ರೈತ, ಆರೋಗ್ಯಕ್ಕಾಗಿ ವೈಧ್ಯ ಮತ್ತು ಶಿಕ್ಷಣಕ್ಕಾಗಿ ಶಿಕ್ಷಕರು ಸಲ್ಲಿಸುವ ಇವರ ಕಾರ್ಯಾ ಅತ್ಯಂತ ಶ್ಲಾಘನೀಯ ಎಂದರು.


 ವೇದಿಕೆಯ ಮೇಲೆ ಸೋಮಪ್ಪ‌ ಕುರಿ, ಯಲ್ಲವ್ವ ಕುರಿ, ಶತಾಯುಷಿ ಸೊಮವ್ವ ಕುರಿ,  ಮಾಜಿ ಸೈನಿಕರ ಸಮನ್ವಯ ಸಮೀತಿ ಅಧ್ಯಕ್ಷ ಬಿ.ಬಿ.ಬೋಗೂರ, ಮಾಜಿ ಗ್ರಾಪಂ ಅಧ್ಯಕ್ಷ ಫಕಿರಪ್ಪ ಮೂಗಬಸವ, ಮಾಜಿ ಯೋಧ ಮಲ್ಲಿಕಾರ್ಜುನ ಇಂಗಳಗಿ, ಗುರು ಮೆಟಗುಡ್, ಉಮೇಶ ಬೊಳೆತ್ತಿನ, ಬಸವರಾಜ ಬಾಳೆಕುಂದರಗಿ ಇದ್ದರು.


ಗ್ರಾಮದ ಪ್ರಮುಖ ಬಿದಿಯಲ್ಲಿ ತೆರೆದ ಜೀಪಿನಲ್ಲಿ ನಿವೃತ್ತ ಸೈನಿಕ‌ ದಂಪತಿಗಳ ಮೆರವಣಿಗೆ ಮೂಲಕ ವೇದಿಕೆಗೆ ಕರೆತರಲಾಯಿತು. ಶಾಲಾ ಮಕ್ಕಳು, ನಿವೃತ್ತ ಸೈನಿಕ ಸಂಘದ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರ ಸಾಥ ನೀಡಿದರು.


 ಕಾರ್ಯಕ್ರಮದಲ್ಲಿ ಗ್ರಾಪಂ ಅಧ್ಯಕ್ಷೆ  ಶ್ರೀದೇವಿ ತಳವಾರ, ಗ್ರಾಪಮ ಸದಸ್ಯರಾದ ಮಲ್ಲವ್ವ ಬಾರಿಗಿಡದ, ಈರಣ್ಣ ಸಂಪಗಾಂವ, ಮಲ್ಲಿಕಾರ್ಜುನ ಕರಡಿಗುದ್ದಿ, ಮಲ್ಲಿಕಾರ್ಜುನ ವಕ್ಕುಂದ,


ಅಪ್ಪು ಇಳಿಗೇರ, ಬಸಪ್ಪ ಪೆಂಟೆದ, ಮುಶೆಪ್ಪ ಜಡಿ, ಸಂಜು ಪಾಟೀಲ, ಗಂಗವ್ವ ಅರಬಳ್ಳಿ, ಮಡಿವಾಳಪ್ಪ ಕಮತಗಿ, ಜೈರಾಬಿ‌ ಶೇಖ, ಮುಶೆಪ್ಪ ಜಡಿ, ಮೊಹನ ವಕ್ಕುಂದ, ದಾದಪೀರ ಶೇಖ, ಉದಯ ಬೂದಿಹಾಳ, ಅಜ್ಜಪ್ಪ ಸಂಗೊಳ್ಳಿ, ಶಿವಾನಂದ ಬೋಳೆತ್ತಿನ,ಮಂಜುನಾಥ  ಸಂಗೋಳ್ಳಿ, ಮಂಜುನಾಥ ಹಪ್ಪಳ್ಳಿ, ಬಸವರಾಜ ಹುಂಬಿ, ನಾಗಪ್ಪ ಕುರಿ, ಸೋಮಪ್ಪ ಮಲ್ಲಣ್ಣವರ, ಪುಂಡಲಿಕ ಕುದರಿ, ಅಶೋಕ ಇಂಗಳಗಿ, ಮಂಜುನಾಥ ಕಳ್ಳಿ ಸೇರಿದಂತೆ ನೂರಾರು ಜನ ಇದ್ದರು.






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ