LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

 ಬಂಡೀಪುರ-ವಯನಾಡ್ ನಡುವೆ ಸಂಚಾರಕ್ಕೆ ಯಾವುದೇ ತೊಡಕಿಲ್ಲ: ಸಚಿವ ಈಶ್ವರ್​ ಖಂಡ್ರೆ

ಬೆಂಗಳೂರು: ಬಂಡೀಪುರ-ವಯನಾಡ್ ನಡುವೆ ಸಂಚಾರಕ್ಕೆ ಯಾವುದೇ ತೊಡಕಿಲ್ಲ ಎಂದು ಸಚಿವ ಈಶ್ವರ್​ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.


ವಿಕಾಸಸೌಧದಲ್ಲಿ ಕರ್ನಾಟಕ ಮತ್ತು ಕೇರಳ ರಾಜ್ಯಗಳನ್ನು ಸಂಪರ್ಕಿಸುವ ಬಂಡೀಪುರ ಮತ್ತು ವಯನಾಡ್ ರಸ್ತೆಗಳ ನಡುವೆ ರಾತ್ರಿ ಸಂಚಾರದ ಕುರಿತ ಪ್ರಶ್ನೆಗೆ ಉತ್ತರಿಸಿ, "ಪ್ರಸ್ತುತ ರಾತ್ರಿ 9ರವರೆಗೆ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಇದರ ಹೊರತಾಗಿಯೂ ಎರಡೂ ಕಡೆಯಿಂದ 2 ಬಸ್​ಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ವೈದ್ಯಕೀಯ ತುರ್ತು ಸಂದರ್ಭದಲ್ಲಿ ವಾಹನಗಳನ್ನು ಪರಿಶೀಲಿಸಿ ಬಿಡಲಾಗುತ್ತಿದೆ" ಎಂದರು.


"ಅರಣ್ಯದೊಳಗೆ ಅಳವಡಿಸಲಾಗಿರುವ ವಿದ್ಯುತ್ ತಂತಿಗಳು ಕೆಲವೆಡೆ ಜೋತು ಬಿದ್ದಿದ್ದು, ಆನೆಗಳು ಸಾವಿಗೀಡಾಗುತ್ತಿವೆ. ವಿದ್ಯುತ್ ತಂತಿ ತೂಗಾಡದಂತೆ ಕ್ರಮ ವಹಿಸಲು ಮತ್ತು ಅಂತರ್ಗತ ಕೇಬಲ್ ಅಳವಡಿಸಿಲು ವಿದ್ಯುತ್​ ಕಂಪನಿಗಳಿಗೆ ತಿಳಿಸಲಾಗಿದೆ" ಎಂದು ಹೇಳಿದರು.


"ಆನೆಗಳಿಂದ ಬೆಳೆಹಾನಿ ಮತ್ತು ಜೀವಹಾನಿ ಆಗುತ್ತಿದ್ದು, ಇದನ್ನು ತಪ್ಪಿಸಲು ಭದ್ರಾ ಅಭಯಾರಣ್ಯದಲ್ಲಿ ಆನೆಗಳ ವಿಹಾರಧಾಮ (ಎಲಿಫೆಂಟ್​ ಸಾಫ್ಟ್ ರಿಲೀಸ್​ ಸೆಂಟರ್​) ನಿರ್ಮಿಸಲು ಯೋಜನೆ ರೂಪಿಸಲಾಗತ್ತಿದೆ. ಇದಕ್ಕೆ 100 ಕೋಟಿ ರೂ. ಅಗತ್ಯವಿದ್ದು, ಬಜೆಟ್​ನಲ್ಲಿ ಅನುದಾನ ನೀಡುವಂತೆ ಹಣಕಾಸು ಸಚಿವರೂ ಆದ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು" ಎಂದು ತಿಳಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್