Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

 ಬಂಡೀಪುರ-ವಯನಾಡ್ ನಡುವೆ ಸಂಚಾರಕ್ಕೆ ಯಾವುದೇ ತೊಡಕಿಲ್ಲ: ಸಚಿವ ಈಶ್ವರ್​ ಖಂಡ್ರೆ

ಬೆಂಗಳೂರು: ಬಂಡೀಪುರ-ವಯನಾಡ್ ನಡುವೆ ಸಂಚಾರಕ್ಕೆ ಯಾವುದೇ ತೊಡಕಿಲ್ಲ ಎಂದು ಸಚಿವ ಈಶ್ವರ್​ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.


ವಿಕಾಸಸೌಧದಲ್ಲಿ ಕರ್ನಾಟಕ ಮತ್ತು ಕೇರಳ ರಾಜ್ಯಗಳನ್ನು ಸಂಪರ್ಕಿಸುವ ಬಂಡೀಪುರ ಮತ್ತು ವಯನಾಡ್ ರಸ್ತೆಗಳ ನಡುವೆ ರಾತ್ರಿ ಸಂಚಾರದ ಕುರಿತ ಪ್ರಶ್ನೆಗೆ ಉತ್ತರಿಸಿ, "ಪ್ರಸ್ತುತ ರಾತ್ರಿ 9ರವರೆಗೆ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಇದರ ಹೊರತಾಗಿಯೂ ಎರಡೂ ಕಡೆಯಿಂದ 2 ಬಸ್​ಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ವೈದ್ಯಕೀಯ ತುರ್ತು ಸಂದರ್ಭದಲ್ಲಿ ವಾಹನಗಳನ್ನು ಪರಿಶೀಲಿಸಿ ಬಿಡಲಾಗುತ್ತಿದೆ" ಎಂದರು.


"ಅರಣ್ಯದೊಳಗೆ ಅಳವಡಿಸಲಾಗಿರುವ ವಿದ್ಯುತ್ ತಂತಿಗಳು ಕೆಲವೆಡೆ ಜೋತು ಬಿದ್ದಿದ್ದು, ಆನೆಗಳು ಸಾವಿಗೀಡಾಗುತ್ತಿವೆ. ವಿದ್ಯುತ್ ತಂತಿ ತೂಗಾಡದಂತೆ ಕ್ರಮ ವಹಿಸಲು ಮತ್ತು ಅಂತರ್ಗತ ಕೇಬಲ್ ಅಳವಡಿಸಿಲು ವಿದ್ಯುತ್​ ಕಂಪನಿಗಳಿಗೆ ತಿಳಿಸಲಾಗಿದೆ" ಎಂದು ಹೇಳಿದರು.


"ಆನೆಗಳಿಂದ ಬೆಳೆಹಾನಿ ಮತ್ತು ಜೀವಹಾನಿ ಆಗುತ್ತಿದ್ದು, ಇದನ್ನು ತಪ್ಪಿಸಲು ಭದ್ರಾ ಅಭಯಾರಣ್ಯದಲ್ಲಿ ಆನೆಗಳ ವಿಹಾರಧಾಮ (ಎಲಿಫೆಂಟ್​ ಸಾಫ್ಟ್ ರಿಲೀಸ್​ ಸೆಂಟರ್​) ನಿರ್ಮಿಸಲು ಯೋಜನೆ ರೂಪಿಸಲಾಗತ್ತಿದೆ. ಇದಕ್ಕೆ 100 ಕೋಟಿ ರೂ. ಅಗತ್ಯವಿದ್ದು, ಬಜೆಟ್​ನಲ್ಲಿ ಅನುದಾನ ನೀಡುವಂತೆ ಹಣಕಾಸು ಸಚಿವರೂ ಆದ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು" ಎಂದು ತಿಳಿಸಿದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ