LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Koppal

ಬರ ಪರಿಸ್ಥಿತಿಯಲ್ಲೂ ರೈತರಿಗೆ ನಿರಂತರ ಆದಾಯ: ವಾಮನ ಮೂರ್ತಿ

ಗೆದಗೇರಿಯಲ್ಲಿ ಕಿಸಾನ್ ಗೋಷ್ಠಿ, ಬೆಳೆ ಪ್ರಾತ್ಯಕ್ಷಿಕೆ



ಕೊಪ್ಪಳ ಸೆಪ್ಟೆಂಬರ್ 02: ರೈತರು ತಮ್ಮ ಹೊಲಗಳಲ್ಲಿ ಮಾವು, ಪೇರಲ, ಪಪಾಯ ಸೇರಿದಂತೆ ವಿವಿಧ ತರಕಾರಿ ಬೆಳೆಗಳನ್ನು ಬೆಳೆಯುವುದರ ಜೊತೆಗೆ ಹೊಲದ ಬದುವಿನಲ್ಲಿ ತೆಂಗಿನ ಗಿಡಗಳನ್ನು ಬೆಳೆಸುವ ಮೂಲಕ ನಿರಂತರ ಆದಾಯ ಗಳಿಸಬಹುದು ಎಂದು ನಿವೃತ್ತ ತೋಟಗಾರಿಕೆ ತಜ್ಞ ಹಾಗೂ ಕೃಷಿ ತಂತ್ರಜ್ಞರ ಸಂಸ್ಥೆಯ ಸದಸ್ಯರಾದ ವಾಮನ ಮೂರ್ತಿ ಹೇಳಿದರು.
ಯಲಬುರ್ಗಾ ತಾಲ್ಲೂಕಿನ ಗೆದಗೇರಿ ಗ್ರಾಮದಲ್ಲಿ ಸೋಮವಾರ (ಆ. 31ರಂದು) ಜಿಲ್ಲಾ ಕೃಷಿ ತರಬೇತಿ ಕೇಂದ್ರ, ಗಂಗಾವತಿ ಹಾಗೂ ಆತ್ಮ ಯೋಜನೆ ಕೃಷಿ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಕಿಸಾನ್ ಗೋಷ್ಠಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ವಿವಿಧ ತೋಟಗಾರಿಕೆ ಹಾಗೂ ತರಕಾರಿ ಬೆಳೆಗಳನ್ನು ಸಮಗ್ರವಾಗಿ ಬೆಳೆಯುವುದರಿಂದ ರೈತರಿಗೆ ವರ್ಷವಿಡೀ ಆದಾಯದ ಮೂಲ ಸೃಷ್ಟಿಯಾಗಲಿದೆ. ಅಲ್ಲದೆ ಬರಗಾಲದಂತಹ ಪ್ರತಿಕೂಲ ಪರಿಸ್ಥಿತಿಯಲ್ಲಿಯೂ ಅಲ್ಪ ಪ್ರಮಾಣದ ಆದಾಯ ಪಡೆಯಲು ಸಾಧ್ಯವಾಗಲಿದೆ ಎಂದು ತಿಳಿಸಿದರು.
ಜಿಲ್ಲಾ ತರಬೇತಿ ಕೇಂದ್ರದ ಕೃಷಿ ಅಧಿಕಾರಿ ಗವಿಸಿದ್ದಯ್ಯ ಹಿರೇಮಠ ಅವರು ಪ್ರಸ್ತುತ ಮಳೆಯ ಅಭಾವ ಹಾಗೂ ಬರ ಪರಿಸ್ಥಿತಿಯ ಕುರಿತು ಮಾಹಿತಿ ನೀಡಿದರು. ರೈತರು ಕೃಷಿ ಹೊಂಡಗಳನ್ನು ನಿರ್ಮಿಸಿಕೊಂಡು ಲಭ್ಯವಿರುವ ನೀರನ್ನು ಸಂರಕ್ಷಿಸಿ ರಕ್ಷಣಾತ್ಮಕ ನೀರಾವರಿ ಒದಗಿಸುವ ಮೂಲಕ ಬೆಳೆಗಳನ್ನು ಉಳಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಇದೇ ಸಂದರ್ಭದಲ್ಲಿ ತೊಗರಿ, ಮೆಕ್ಕೆಜೋಳ ಹಾಗೂ ನೆಲಗಡಲೆ ಬೆಳೆಗಳಿಗೆ ಸಂಬಂಧಿಸಿದಂತೆ ರೈತರ ಪ್ರಶ್ನೆಗಳಿಗೆ ಉತ್ತರಿಸಿದರು.
ನಂತರ ರೈತ ಶ್ರೀ ಪರಸಪ್ಪನವರ ತೊಗರಿ ಹೊಲದಲ್ಲಿ ಕುಡಿ ಚಿವುಟುವ ಪ್ರಾತ್ಯಕ್ಷಿಕೆಯನ್ನು ನಡೆಸಲಾಯಿತು. ತೊಗರಿ ಬೆಳೆಯಲ್ಲಿ ಸೂಕ್ತ ಸಮಯದಲ್ಲಿ ಕುಡಿ ಚಿವುಟುವುದರಿಂದ ಉತ್ತಮ ಬೆಳವಣಿಗೆ ಹಾಗೂ ಹೆಚ್ಚಿನ ಇಳುವರಿ ಪಡೆಯಲು ಸಾಧ್ಯ ಎಂದು ರೈತರಿಗೆ ತಿಳಿಸಲಾಯಿತು.
ಬರ ಪರಿಸ್ಥಿತಿಯಿಂದ ಬೆಳೆಗಳಿಗೆ ಉಂಟಾಗುವ ಜೈವಿಕ ಒತ್ತಡವನ್ನು ಕಡಿಮೆ ಮಾಡಲು ನ್ಯಾನೋ ಯೂರಿಯಾ ಹಾಗೂ 19:19:19ರಂತಹ ನೀರಿನಲ್ಲಿ ಕರಗುವ ಗೊಬ್ಬರಗಳನ್ನು ಸೂಕ್ತ ಪ್ರಮಾಣದಲ್ಲಿ ಸಿಂಪಡಿಸುವ ಮೂಲಕ ಬೆಳೆಗಳನ್ನು ರಕ್ಷಿಸಿಕೊಳ್ಳಬಹುದು ಎಂದು ವಾಮನ ಮೂರ್ತಿ ಸಲಹೆ ನೀಡಿದರು. ತೊಗರಿ ಬೆಳೆ ಹೂ ಬಿಡಲು ಆರಂಭಿಸಿದ ಸಂದರ್ಭದಲ್ಲಿ ‘ಪಲ್ಸ್ ಮ್ಯಾಜಿಕ್’ ಲಘು ಪೋಷಕಾಂಶಗಳ ಮಿಶ್ರಣವನ್ನು ಸಿಂಪಡಿಸುವುದರಿAದ ಶೇ.15ರಿಂದ 20ರಷ್ಟು ಇಳುವರಿ ಹೆಚ್ಚಿಸಬಹುದು ಎಂದು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಪ್ರಗತಿಪರ ರೈತರಾದ ಅಚ್ಚಪ್ಪ, ತಿರುಪತಿ, ಪರಸಪ್ಪ, ನೀಲಪ್ಪ ಕಕ್ಕಿಹಳ್ಳಿ, ಶಿವಪ್ಪ ಕಂಡಕ್ಟರ್ ಸೇರಿದಂತೆ ಹಲವು ರೈತರು ಭಾಗವಹಿಸಿದ್ದರು. ಆತ್ಮ ಯೋಜನೆಯ ಜಿಲ್ಲಾ ಉಪ ಯೋಜನಾ ನಿರ್ದೇಶಕ ಶಿವಪ್ಪ ನಾಯಕ, ಬಿಟಿಎಂ ಜ್ಯೋತಿ ಹಾಗೂ ಕೃಷಿಸಖಿ ನಿರ್ಮಲ ಉಪಸ್ಥಿತರಿದ್ದರು.
****

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್