ಬೆಂಗಳೂರು: ಕುವೆಂಪು ವಿಶ್ವವಿದ್ಯಾಲಯದ ಶಿಕ್ಷಣ ವಿಭಾಗದ ಅತಿಥಿ ಉಪನ್ಯಾಸಕ ಬಾಲಚಂದ್ರ ಮಡಿವಾಳ ಅವರು ಮಾಧ್ಯಮಿಕ ಶಿಕ್ಷಕ ಶಿಕ್ಷಣ ಸಂಸ್ಥೆಗಳ ಪ್ರಶಿಕ್ಷಕರಲ್ಲಿ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳ ಬಳಕೆ ವಿಷಯದ ಮೇಲೆ ಮಂಡಿಸಿದ ಮಹಾಪ್ರಬಂಧಕ್ಕೆ ಕುವೆಂಪು ವಿಶ್ವವಿದ್ಯಾಲಯದಿಂದ ಪಿಎಚ್ಡಿ ಪದವಿ ಲಭಿಸಿದೆ. ಕುವೆಂಪು ವಿಶ್ವವಿದ್ಯಾಲಯದ ಶಿಕ್ಷಣ ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಪ್ರೊ.ಎಸ್.ಎಸ್.ಪಾಟೀಲರು ಮಾರ್ಗದರ್ಶನ ನೀಡಿದ್ದಾರೆ. ವಿಶ್ವವಿದ್ಯಾಲಯದ ಕುಲಪತಿಗಳು ಸೇರಿದಂತೆ ಪ್ರಾಧ್ಯಾಪಕರು ಅಭಿನಂದಿಸಿದ್ದಾರೆ.
