Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಯಬಾಗ:

ರಾಯಬಾಗ: ಬೆಳಗಾವಿಯಲ್ಲಿ ಎಮ್‌ಇಎಸ್ ನಾಯಕರು ಜೂ.22 ರಂದು ಕನ್ನಡ ಕಡ್ಡಾಯದ ವಿರುದ್ಧ ಮೋರ್ಚಾ ಮಾಡಲಿದ್ದು, ಅದಕ್ಕೆ ಜಿಲ್ಲಾಧಿಕಾರಿಯವರು ಅನುಮತಿ ನಿರಾಕರಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕಾ ಅಧ್ಯಕ್ಷ ಅಶೋಕ ಅಂಗಡಿ ನೇತೃತ್ವದಲ್ಲಿ ಕರವೇ ಕಾಯರ್ಯಕರ್ತರು ಗ್ರೇಡ್2 ತಹಶೀಲ್ದಾರ ಪರಮಾನಂದ ಮಂಗಸೂಳಿ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.
  ಕಳೆದ ಐದು ವರ್ಷಗಳಿಂದ ಗಡಿಭಾಗ ಬೆಳಗಾವಿಯಲ್ಲಿ ಭಾಷಾ ರಾಜಕಾರಣ ಮಾಡಿ ಮುಗ್ಧ ಮರಾಠಿಗರನ್ನು ಪ್ರಚೋದಿಸಿ ಅವರನ್ನು ಕರ್ನಾಟಕ ಸರಕಾರದ ವಿರುದ್ಧ, ಕನ್ನಡಿಗರ ವಿರುದ್ಧ ಎತ್ತಿ ಕಟ್ಟುತ್ತಲೇ ಬಂದಿರುವ ನಾಡದ್ರೋಹಿ ಎಮ್‌ಇಎಸ್ ನಾಯಕರು ಈಗ ಮತ್ತೆ ಬೆಳಗಾವಿಯಲ್ಲಿ ಬಾಲ ಬಿಚ್ಚುತ್ತಿದ್ದಾರೆ. ಅವರನ್ನು ತಕ್ಷಣ ಬೆಳಗಾವಿಯಿಂದ ಮಹಾರಾಷ್ಟ್ರಕ್ಕೆ ಗಡಿಪಾರು ಮಾಡಬೇಕು, 
  ಬೆಳಗಾವಿ ಕನ್ನಡದ ನೆಲ, ಇಲ್ಲಿ ಕನ್ನಡವೇ ಸಾರ್ವಭೌಮ, ಕನ್ನಡ ನೆಲ, ಜಲ, ಭಾಷೆ ಮತ್ತು ಸಂಸ್ಕೃತಿಯನ್ನು ಗೌರವಿಸುವುದು ಕನ್ನಡಿಗರಾದ ನಮಗೆ ಹೆಮ್ಮೆ ಹಾಗೂ ಕರ್ತವ್ಯ. ಕನ್ನಡ ಕಡ್ಡಾಯದ ವಿರುದ್ಧ ದಿ.22 ರಂದು ಪ್ರತಿಭಟನೆ ನಡೆಸಲು ನಿರ್ಧರಿಸಿರುವ ಎಮ್‌ಇಎಸ್ ನಾಯಕರನ್ನು ಮುಂಜಾಗೃತವಾಗಿ ಬಂಧಿಸಬೇಕು. ಇದನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಬೇಕೆಂದು ಮನವಿ ಮಾಡಿದರು.
   ಒಂದುವೇಳೆ ಜಿಲ್ಲಾಡಳಿತ ರಾಜಕೀಯ ಒತ್ತಡಕ್ಕೆ ಮಣಿದು ಎಮ್‌ಇಎಸ್ ಗೆ ಕನ್ನಡ ಕಡ್ಡಾಯದ ವಿರುದ್ಧ ಅನುಮತಿ ನೀಡಿದರೆ ಪ್ರತಿಯಾಗಿ ಅಂದೇ ಕರವೇ ಬೆಳಗಾವಿಯಲ್ಲಿ ಕನ್ನಡವೇ ಸಾರ್ವಭೌಮ ಎಂದು ಕನ್ನಡ ಸ್ವಾಭಿಮಾನಿ ರ‍್ಯಾಲಿ ನಡೆಸಲಿದೆ. ರ‍್ಯಾಲಿಯಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಿಂದ ಕರವೇ ಕಾರ್ಯಕರ್ತರು ಬೆಳಗಾವಿಗೆ ಆಗಮಿಸುತ್ತಾರೆಂದು ತಿಳಿಸಿದರು.
  ರಾಜು ಕುಲಗುಡೆ, ಆನಂದ ಹುದ್ದಾರ, ರಮೇಶ ಜಾಧವ, ಕಿರಣ ನಾವಿ, ಉಮೇಶ ಕಾಂಬಳೆ, ಮಹೇಶ ಕೊರವಿ, ವಿಶಾಲ ಶಾರಬಿದ್ರೆ, ಸುಪ್ರೀತ ಗಣಿ, ಮಣಿಕಂಠ ನಾವಿ ಸೇರಿ ಅನೇಕರು ಇದ್ದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು  ಜಗನ್ನಾಥರಾವ್ ಜೋಶಿ ಸ್ಮಾರಕ ಭವನ ಅದ್ದೂರಿಯಾಗಿ ಲೋಕಾರ್ಪಣೆ. ಚಿಕ್ಕಸಂಗಮ ಅಂತಾರಾಷ್ಟ್ರೀಯ ಪ್ರವಾಸಿತಾಣ  ಮಾಡುವ ಗುರಿ ರಾಯಬಾಗ:ಗ್ರಾಹಕರ ಅಚಲ ವಿಶ್ವಾಸವೇ ಸಹಕಾರಿಯ ಯಶಸ್ಸಿಗೆ ಕಾರಣ: ಸಂಜಯ ಅಡಕೆಜು ೨೨ ರಿಂದ ಜು ೨೮ರ ವರೆಗೆ ಸಂತಸದ ಕಾರ್ಯಕ್ರಮ ಹಾಗೂ ಸುದರ್ಶನ ಕ್ರಿಯಾ ಶಿಬಿರವಿಜಯಾನಂದ ಕಾಪ್ಪನವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಜೂನ್ ೨೨ರಂದು ಹಕ್ಕೊತ್ತಾಯ ಪಾದಯಾತ್ರೆ ಇದ್ದಲಗಿ ಗ್ರಾಮಸ್ಥರ ಧರಣಿ ಸತ್ಯಾಗ್ರಹ : ಬೇಡಿಕೆಗಳ ಇಡೇರಿಕೆಗೆ ಪ್ರಾಮಾಣಿಕ ಪ್ರಯತ್ನದ ಭರವಸೆ ನೀಡಿದ ಸಂಸದ ಪಿ.ಸಿ. ಗದ್ದಿಗೌಡರ ಶ್ರೀ ರಾಮನ ಆದರ್ಶ ತತ್ವ ಸಿದ್ಧಾಂತಗಳನ್ನು ಇಂದಿನ ಯುವಕರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು : ಶಾಸಕ ವಿಶ್ವಾಸ ವೈದ್ಯ ರೈತರಿಗೆ ಖೇತ ಬಚಾವೋ ಅಭಿಯಾನ ತರಬೇತಿ ಕಾರ್ಯಕ್ರಮ*ಅಳವಂಡಿ ಪೋಲಿಸ್ ಠಾಣೆಯ ಯಲ್ಲಿ ದೌರ್ಜನ್ಯ: ಆರೋಪ: ಕ್ರಮಕ್ಕೆ ಒತ್ತಾಯ*