Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಜಯ್ ದೇವರಕೊಂಡ ಹೊಸ ಸಿನಿಮಾ

ಟಾಲಿವುಡ್ ರೌಡಿಬಾಯ್ ವಿಜಯ್ ದೇವರಕೊಂಡ ಹೊಸ ಚಿತ್ರ ಘೋಷಣೆಯಾಗಿದೆ. ಹಾಯ್ ನಾನ್ನ ಸಿನಿಮಾ ಖ್ಯಾತಿಯ ಶೌರ್ಯುವ್ ಜೊತೆ ವಿಜಯ್ ಕೈ ಜೋಡಿಸಿದ್ದಾರೆ. ಸಿನಿಮಾದ ಅನೌನ್ಸ್‌ಮೆಂಟ್ ಪೋಸ್ಟರ್ ಆಕರ್ಷಕವಾಗಿದೆ. ಈ ಪೋಸ್ಟರ್‌ನಲ್ಲಿ ವಿಜಯ್ ದೇವರಕೊಂಡ ನಾಲ್ಕು ಶ್ವಾನಗಳನ್ನು ಹಿಡಿದು ಗತ್ತಿನಿಂದ ನಡೆದು ಬರುತ್ತಿದ್ದಾರೆ. ಅವರ ಬೆನ್ನ ಹಿಂದೆ ಏಳು ಜನರು ವಿವಿಧ ಆಯುಧಗಳನ್ನು ಹಿಡಿದು ನಿಂತಿದ್ದಾರೆ‌.
ಹೆಸರಿಡದ ಚಿತ್ರದಲ್ಲಿ ಜಾಗತಿಕ ತಂತ್ರಜ್ಞರು ಕೆಲಸ ಮಾಡುತ್ತಿದ್ದಾರೆ. ಹಾಲಿವುಡ್‌ನ ಖ್ಯಾತ ಸರಣಿಗಳಾದ ‘ಹೌಸ್ ಆಫ್ ದಿ ಡ್ರ್ಯಾಗನ್’ ಮತ್ತು ‘ಫಾಲ್ಔಟ್‌’ಗೆ ಕೆಲಸ ಮಾಡಿದ ಅಲೆಜಾಂಡ್ರೊ ಮಾರ್ಟಿನೆಜ್ ಅವರು ಈ ಚಿತ್ರಕ್ಕೆ ಛಾಯಾಗ್ರಹಣ ಮಾಡುತ್ತಿದ್ದಾರೆ. ಇನ್ನು ಬ್ಯಾಟ್‌ಮ್ಯಾನ್ ಫಾರೆವರ್ ಹಾಗೂ ಗಾಡ್ಸ್ ಆಫ್ ಈಜಿಪ್ಟ್ ನಂತಹ ಬೃಹತ್ ಸಿನಿಮಾಗಳ ವಿಎಫ್‌ಎಕ್ಸ್ ಮೇಲ್ವಿಚಾರಣೆ ಮಾಡಿದ್ದ ಎರಿಕ್ ಡಸ್ಟರ್ ಅವರು ವಿಷ್ಯುವಲ್ ಎಫೆಕ್ಟ್ಸ್ ನೋಡಿಕೊಳ್ಳಲಿದ್ದಾರೆ.
ಅನಿಮಲ್ ಮತ್ತು ಓಂ ಶಾಂತಿ ಓಂ ಚಿತ್ರಗಳಿಗೆ ಕೆಲಸ ಮಾಡಿದ ಸುರೇಶ್ ಸೆಲ್ವರಾಜನ್ ಕಲಾ ನಿರ್ದೇಶನ ಹಾಗೂ ಹೇಷಮ್ ಅಬ್ದುಲ್ ವಹಾಬ್ ಅವರ ಸಂಗೀತ ಈ ಚಿತ್ರಕ್ಕಿದೆ. ವೀರಾ ಬ್ಯಾನರ್ ಅಡಿಯಲ್ಲಿ ಅತ್ಯಂತ ಅದ್ಧೂರಿಯಾಗಿ ಮೂಡಿಬರುತ್ತಿರುವ ಈ ಸಿನಿಮಾ, ವಿಜಯ್ ದೇವರಕೊಂಡ ಕೆರಿಯರ್‌ನಲ್ಲಿ ಮತ್ತೊಂದು ಮೈಲಿಗಲ್ಲಾಗಲಿದೆ. ಸದ್ಯಕ್ಕೆ ಸಿನಿಮಾಗೆ ‘VDxShouryuv’ ಎಂದು ಕರೆಯಲಾಗಿದೆ. ಅಂದಹಾಗೇ ಇದು ಪೌರಾಣಿಕ ಹಿನ್ನೆಲೆಯುಳ್ಳ ಚಿತ್ರವಾಗಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಇಟಿ ಪರೀಕ್ಷೆ; ವಿದ್ಯಾರ್ಥಿಗಳ ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶಮಕ್ಕಳ ಮೇಲೆ ನಿಗಾ ಇರಲಿ! ಬೋಧಕರ ತರಬೇತಿ ಶಿಬಿರ ಪ್ರತಿ ೧೨ವರ್ಷದ ವಿಶೇಷ ಜಾತ್ರೆಗೆ ಸಾವಿರಾರು ಭಕ್ತರ ಆಗಮನಮಹರ್ಷಿ ಭಗೀರಥರ ತತ್ವ ಆದರ್ಶಗಳು ಇಂದಿಗೂ ಪ್ರಸ್ತುತ :  ಬಾಲಚಂದ್ರ ಜಾರಕಿಹೊಳಿಶಾರದಾ ವಿದ್ಯಾಪೀಠ ಶಾಲೆಯ ವಿದ್ಯಾರ್ಥಿನಿ ಜ್ಞಾನೇಶ್ವರಿ ಎಸ್‌ಎಸ್‌ಎಲ್‌ಸಿ‌ನಲ್ಲಿ ಉತ್ತಮ ಸಾಧನೆಬಸವಜ್ಯೋತಿಗೆ ಪ್ರೌಢಶಾಲೆಗೆ ಶೇ ೧೦೦ ಫಲಿತಾಂಶಎಸ್‌ಎಸ್‌ಎಲ್‌ಸಿ ಫಲಿತಾಂಶ; ಜಿಲ್ಲೆಗೆ ಕಾಗವಾಡ ದ್ವೀತಿಯ ಸ್ಥಾನ: ಬಿಇಓ ಪಾಂಡುರAಗ ಮದಭಾವಿಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸರಕಾರಿ ಶಾಲೆ ವಿದ್ಯಾರ್ಥಿನಿ ಪ್ರಾರ್ಥನಾ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಕುಡಿಯುವ ನೀರಿನ ತೊಂದರೆಯಾಗದಂತೆ ಮುಂಜಾಗೃತ ಕ್ರಮಕೈಗೊಳ್ಳಿ : ಯಶವಂತರಾಯಗೌಡ ಪಾಟೀಲ