LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ವನ್ಯಜೀವಿ ಸಂಚಾರವಿರುವ ಚಾರಣಪಥ, ಸಂಚಾರಪಥ ಸ್ಥಗಿತಕ್ಕೆ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು, 

ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ ಚಾರಣಪಥ ಮತ್ತು ಸಂಚಾರಪಥಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.

ಮುಖ್ಯ ವನ್ಯಜೀವಿ ಪರಿಪಾಲಕರಿಂದ ಅಧಿಕೃತ ಸುತ್ತೋಲೆ:

ಮೇ 10 ರಂದು ನಾಗಮಲೆ ಅರಣ್ಯ ಪ್ರದೇಶ, ಎಂ. ಎಂ. ಹಿಲ್ಸ್ ವನ್ಯಜೀವಿ ವಿಭಾಗದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ನಡೆದಿರುವ ಹಿನ್ನಲೆಯಲ್ಲಿ ಹಾಗೂ ವನ್ಯಪ್ರಾಣಿಗಳು ಸಂಚರಿಸುವ ಸಂಚಾರ ಪಥಗಳಲ್ಲಿ ಸಾರ್ವಜನಿಕರ ಹಾಗೂ ಟ್ರೆಕ್ಕರ್‌ಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಚಿರತೆ, ಹುಲಿ, ಆನೆ, ಕರಡಿ ಹಾಗೂ ಇತರೆ ವನ್ಯಪ್ರಾಣಿಗಳು ಸಂಚರಿಸುವ ಹಾಗೂ ಸದರಿ ಪ್ರದೇಶಗಳಲ್ಲಿ ಮಾನವ-ವನ್ಯಜೀವಿ ಸಂಘರ್ಷ ಸಂಭವವಿರುವ ಎಲ್ಲಾ ಸಂಚಾರ ಪಥಗಳನ್ನು ತಕ್ಷಣದಿಂದಲೇ ಸ್ಥಗಿತಗೊಳಿಸಲಾಗಿದೆ. ಮುಂದಿನ ಆದೇಶದವರೆಗೆ ಈ ಸೂಚನೆ ಅನ್ವಯವಾಗಲಿದೆ ಎಂದು ಪ್ರಧಾನ ಮುಖ್ಯ ಅರಣ್ಯಸಂರಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

ಹೊಸ ಎಸ್​ಒಪಿ;

ಇನ್ನುಚಾರಣ ಚಟುವಟಿಕೆಗಳಿಗೆ ಹೊಸ ಎಸ್​ಒಪಿ ಪಾಲಿಸುವುದು ಕಡ್ಡಾಯವಾಗಲಿದ್ದು, ಮುನ್ನೆಚ್ಚರಿಕೆ ಕ್ರಮಕೈಗೊಳ್ಳದ ಪಥಗಳಲ್ಲಿ ಚಟುವಟಿಕೆ ನಿಲ್ಲಿಸಲು ನಿರ್ಧರಿಸಲಾಗಿದೆ. ನಿಯಮ ಪಾಲನೆಗೆ ಸಿದ್ಧತೆ ಮಾಡಿಕೊಂಡ ನಂತರವಷ್ಟೇ ಚಾರಣಕ್ಕೆ ಅವಕಾಶ ಸಿಗಲಿದ್ದು, ಈ ಬಗ್ಗೆ ಮುಖ್ಯ ವನ್ಯಜೀವಿ ಪರಿಪಾಲಕರು ಪ್ರತ್ಯೇಕ ಸುತ್ತೋಲೆ ಹೊರಡಿಸಿದ್ದಾರೆ. ಪರಿಸರ ಪ್ರವಾಸೋದ್ಯಮ ಮಂಡಳಿ ಮೇಲ್ವಿಚಾರಣೆಯ ಪಥಗಳಿಗೂ ಇದು ಅನ್ವಯವಾಗಲಿದ್ದು, ಮಾನವ-ವನ್ಯಜೀವಿ ಸಂಘರ್ಷ ತಡೆಯಲು ಅರಣ್ಯ ಇಲಾಖೆ ಈ ಕ್ರಮ ಕೈಗೊಂಡಿದೆ ಎನ್ನಲಾಗಿದೆ.

 

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್