Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

 ಶುಭಂ ಶಳಕೆ ವಿರುದ್ಧ ರೌಡಿಶೀಟ್ ಓಪನ್ ಮಾಡಿ ಗೂಂಡಾ ಕಾಯ್ದೆ ಅಡ್ಡ ಗಡಿ ಪಾರು ಮಾಡಲು  ಕರವೇ ಆಗ್ರಹ



ಬೆಳಗಾವಿ : ನಿರಂತರವಾಗಿ ಗಡಿ ಭಾಗದ ಬೆಳಗಾವಿಯಲ್ಲಿ ಪ್ರಚೋದನಕಾರಿ ಹೇಳಿಕೆ ನೀಡುತ್ತ, ನಾಡದ್ರೋಹಿ ಚಟುವಟಿಕೆಗಳಲ್ಲಿ ತೊಡಗಿರುವ ಎಂಇಎಸ್ ನಾಯಕ ಶುಭಂ ಶಳಕೆ ವಿರುದ್ಧ ಗೂಂಡಾ ಕಾಯ್ದೆಯಡಿಯಲ್ಲಿ ಕೇಸು ದಾಖಲಿಸಿ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ಹಾಗೂ  ಕಾರ್ಯಕರ್ತರು ಪೊಲೀಸ್ ಕಮಿಷನರ್ ಗೆ ಕರವೇ   ಮನವಿ ಮಾಡಿಕೊಂಡರು.

ಶುಕ್ರವಾರ ಪೊಲೀಸ್ ಕಮಿಷನರ್ ಕಛೇರಿಗೆ ತೆರಳಿದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು,  ರಾಜಕೀಯ ಒತ್ತಡಕ್ಕೆ ಮಣಿದು ಶುಭಂ ಶಳಕೆಯನ್ನು ರಕ್ಷಿಸಲು ಪೋಲಿಸ್ ಇಲಾಖೆ ಮುಂದಾದರೆ  ಗೃಹಮಂತ್ರಿಗಳು ಹಾಗೂ ಪೊಲೀಸ್ ಮಹಾನಿರ್ದೇಶಕರ ಗಮನಕ್ಕೆ ತರುವ ಮೂಲಕ ಪೊಲೀಸರ ವಿಳಂಬ ನೀತಿಯನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದರು.

ನಾಡದ್ರೋಹಿ ಎಂಇಎಸ್ ನಾಯಕ ಶುಭಂ ಶಳಕೆ ವಿರುದ್ಧ ಬೆಳಗಾವಿ ಮಹಾನಗರದ ಪೊಲೀಸ್ ಠಾಣೆಗಳಲ್ಲಿ ಎಷ್ಟು ಕೇಸುಗಳು ದಾಖಲಾಗಿವೆ? ಈವರೆಗೆ ಆತನ ವಿರುದ್ಧ ಗೂಂಡಾ ಕಾಯ್ದೆಯಡಿಯಲ್ಲಿ ಕೇಸು ದಾಖಲು ಮಾಡಲು ವಿಳಂಬ ಆಗಿದ್ದೇಕೆ? ಎಷ್ಟು ಜನ ಕನ್ನಡಪರ ಹೋರಾಟಗಾರರ ಮೇಲೆ ತಾವು ರೌಡಿಶೀಟ್ ಓಪನ್ ಮಾಡಿದ್ದೀರಾ? ಈ ಎಲ್ಲ ಪ್ರಶ್ನೆಗಳಿಗೆ ಸಮಸ್ತ ಕನ್ನಡಿಗರಿಗೆ  ತಾವು ಕೂಡಲೇ ಉತ್ತರ ಕೊಡಬೇಕು. ಅನೇಕ ಕನ್ನಡಪರ ಹೋರಾಟಗಾರರ ವಿರುದ್ದ ರೌಡಿಶೀಟ್ ಓಪನ್ ಮಾಡಿ ನಾಡದ್ರೋಹಿ ಶುಭಂ ಶಳಕೆ ವಿರುದ್ಧ ಇನ್ನುವರೆಗೆ ಯಾವ ಕಾರಣಕ್ಕಾಗಿ ರೌಡಿಶೀಟ್ ಓಪನ್ ಮಾಡಿ ಗೂಂಡಾ ಕಾಯ್ದೆಯಲ್ಲಿ ಏಕೆ ಬಂಧಿಸಿಲ್ಲ? ಎಂದು ಪ್ರಶ್ನಿಸಿದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*